ಸಿದ್ದರಾಮಯ್ಯ 
ರಾಜ್ಯ

ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟಿನ್, ಆಹಾರ ಕ್ರಮದಲ್ಲಿ ಬದಲಾವಣೆ: ಸಿಎಂ ಸಿದ್ದರಾಮಯ್ಯ

ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ ಶೇ.70 ರಷ್ಟು ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯಿಂದ ಶೇ. 50 ರಷ್ಟು ಹಾಗೂ ಸರ್ಕಾರದಿಂದ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ ಎಂದರು.

ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇಂದಿರಾ ಕ್ಯಾಂಟಿನ್ ಆಹಾರ ಕ್ರಮದಲ್ಲಿ ಬದಲಾವಣೆ
ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ತಪ್ಪಿತಸ್ಥರ ವಿರುದ್ದ ತನಿಖೆ
ಕಲುಷಿತ ನೀರಿನ ಸೇವನೆಯಿಂದ ಕೊಪ್ಪಳದಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ  ಒಬ್ಬರು ಮೃತಪಟ್ಟಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್