ಬಸ್ ನಲ್ಲಿ ಅಂಟಿಸಲಾಗಿರುವ ಬಿಜೆಪಿ ಸ್ಟಿಕರ್. 
ರಾಜ್ಯ

ಶಕ್ತಿ ಯೋಜನೆ ಚಾಲನೆ ವೇಳೆ ಬಸ್​ ಮೇಲೆ ಬಿಜೆಪಿ ಸ್ಟಿಕ್ಕರ್: ಅಧಿಕಾರಿಗಳ ಯಡವಟ್ಟು

ಶಕ್ತಿ ಯೋಜನೆಗೆ ಚಾಲನೆ ನೀಡುವ ವೇಳೆ ಬಸ್ ಮೇಲೆ ಇದ್ದ ಬಿಜೆಪಿ ಸ್ಟಿಕ್ಕರ್ ನೋಡಿ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಗರಂ ಆದ ಬೆಳವಣಿಗೆ ಭಾನುವಾರ ಕಂಡು ಬಂದಿತು.

ಬಳ್ಳಾರಿ: ಶಕ್ತಿ ಯೋಜನೆಗೆ ಚಾಲನೆ ನೀಡುವ ವೇಳೆ ಬಸ್ ಮೇಲೆ ಇದ್ದ ಬಿಜೆಪಿ ಸ್ಟಿಕ್ಕರ್ ನೋಡಿ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಗರಂ ಆದ ಬೆಳವಣಿಗೆ ಭಾನುವಾರ ಕಂಡು ಬಂದಿತು.

ಶಕ್ತಿ ಯೋಜನೆಗೆ ಚಾಲನೆ ನೀಡಲು ಆರು ಹೊಸ ಬಸ್ ತರಲಾಗಿತ್ತು. ಈ ವೇಳೆ ಒಂದು ಬಸ್​ ಮೇಲೆ ಬಿಜೆಪಿ ಸ್ಟಿಕ್ಕರ್ ಕಂಡು ಬಂದಿತ್ತು. ಸ್ಟಿಕರ್ ಕಂಡ ಸಚಿವ ನಾಗೇಂದ್ರ ಅವರು, ಯೋಜನೆಗೆ ಚಾಲನೆ ನೀಡಲು ನಿರಾಕರಿಸಿದರು. ಈ ವೇಳ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಬಳಿಕ ಕಾರ್ಯಕ್ರಮವನ್ನು ಸುಗಮವಾಗಿ ನಡೆಯುವಂತೆ ಮಾಡಲು ಬಿಜೆಪಿ ಸ್ಟಿಕರ್'ನ್ನು ತೆಗೆದು ಹಾಕಿದರು. ನಂತರ ನಾಗೇಂದ್ರ ಅವರು ಬಸ್'ಗೆ ಚಾಲನೆ ನೀಡಿದರು.

ಇತ್ತೀಚೆಗೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ರ್ಯಾಲಿಗಳಿಗೆ ಬಸ್ ಗಳನ್ನು ಬಳಕೆ ಮಾಡಲಾಗಿತ್ತು. ರ್ಯಾಲಿ ವೇಳೆ ಬಿಜೆಪಿ ಪೋಸ್ಟರ್ ಗಳನ್ನು ಬಸ್ ಗಳ ಮೇಲೆ ಅಂಟಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಟಿಕರ್ ಗಾತ್ರದಲ್ಲಿ ಚಿಕ್ಕದಾಗಿತ್ತು. ಹೀಗಾಗಿ ಅದನ್ನು ಯಾರೂ ಗಮನಿಸಿಲ್ಲ. ಸಚಿವರ ಗಮನಕ್ಕೆ ಬಂದ ಕೂಡಲೇ ಅದನ್ನು ತೆಗೆಯಲಾಯಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT