ಸಿಡಿಲು ಬಡಿದು ಸಾವನ್ನಪ್ಪಿದ ವ್ಯಕ್ತಿ 
ರಾಜ್ಯ

ಚಿಕ್ಕಮಗಳೂರು: ಸಿಡಿಲು ಬಡಿದು ಒಬ್ಬರು ಸಾವು, ನಾಲ್ವರಿಗೆ ಗಾಯ

ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತನನ್ನು ತರಿಕೆರೆ ತಾಲೂಕ್ ಭಾವಿಕೆರ ಗ್ರಾಮದ ಮುಕೇಶ್‌ (40) ಎಂದು ಗುರುತಿಸಲಾಗಿದೆ. 

ಚಿಕ್ಕಮಗಳೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತನನ್ನು ತರಿಕೆರೆ ತಾಲೂಕ್ ಭಾವಿಕೆರ ಗ್ರಾಮದ ಮುಕೇಶ್‌ (40) ಎಂದು ಗುರುತಿಸಲಾಗಿದೆ. 

ದೇವರ ದರ್ಶನ ಪಡೆದ ನಂತರ ಊರಿಗೆ ವಾಪಸ್ಸಾಗಲು ಮುಂದಾದಾಗ ಜೋರಾಗಿ ಮಳೆ ಬಂದಿದೆ. ರೂಮಿನ ಹೊರಗೆ ಕಾಯುತ್ತ ನಿಂತಿದ್ದ ಸಮಯದಲ್ಲಿ ಸಿಡಿಲು ಬಡಿದಿದೆ.ತೀವ್ರ ಅಸ್ವಸ್ಥಗೊಂಡ ಮುಕೇಶ್‌ ಅವರನ್ನು ಮೊದಲು ಯಗಟಿ ಆಸ್ಪತ್ರೆಗೆ ನಂತರ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಎರಡೂವರೆ ವರ್ಷದ ಹಿಂದೆ ಕಾವ್ಯ ಅವರನ್ನು ಮುಕೇಶ್‌ ಮದುವೆಯಾಗಿದ್ದರು.

ಮುಕೇಶ್ ಹಾಗೂ ಸಂಬಂಧಿಕರು ದೇವಸ್ಥಾನದ ಹೊರಗಡೆ ನಿಂತಿದಾಗ ದಿಢೀರನೇ ಸಿಡಿಲು ಬಡಿದ್ದು ಮೃತಪಟ್ಟಿದ್ದಾರೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳು ಕಡೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ವಾಪಸ್ಸಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT