ಸಾಂದರ್ಭಿಕ ಚಿತ್ರ 
ರಾಜ್ಯ

ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕನ ವಿರುದ್ಧ ವಂಚನೆ, ಬೆದರಿಕೆ ಆರೋಪ

ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ಕಮ್ ನಿರ್ದೇಶಕ ರೂಪೇಶ್ ಜಿ ರಾಜ್ ಅವರು ಕೆಲವು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿರುವ ತಮ್ಮ ಸಹೋದರ ಗಿರೀಶ್ ಜಿ ರಾಜ್ ವಿರುದ್ಧ ದೂರು ದಾಖಲಿಸಿದ್ದಾರೆ. 

ಕೆಲವು ವರ್ಷಗಳ ಹಿಂದೆ ಸಿನಿಮಾ ನಿರ್ಮಾಣಕ್ಕಾಗಿ ತನ್ನ ಸಹೋದರ ತನ್ನಿಂದ 33 ಲಕ್ಷ ಮತ್ತು ತನ್ನ ಮೂವರು ಸ್ನೇಹಿತರಿಂದ 1.10 ಕೋಟಿ ಸಾಲ ಪಡೆದು, ಅದನ್ನು ಹಿಂದಿರುಗಿಸುವ ಭರವಸೆ ನೀಡಿದ್ದರು ರೂಪೇಶ್ ದೂರಿನಲ್ಲಿ ತಿಳಿಸಿದ್ದಾರೆ.

ಆದರೂ ಮರುಪಾವತಿ ಮಾಡದ ಕಾರಣ, ಸಾಲ ತೀರಿಸುವಂತೆ ರೂಪೇಶ್ ಅವರ ಮನೆಗೆ ಭೇಟಿ ನೀಡಿದಾಗ ಬೆದರಿಕೆ ಹಾಕಿದ್ದರು. ಗಿರೀಶ್ ಅವರ ಸ್ನೇಹಿತರು ಕೂಡ ರೂಪೇಶ್‌ಗೆ ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಅವರು ತಮ್ಮ ಸಹೋದರನಿಗೆ ಯಾವುದೇ ಹಣವನ್ನು ಸಾಲವಾಗಿ ನೀಡಿಲ್ಲ ಎಂದು ಲಿಖಿತವಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ ಎಂದು ದೂರಿಲ್ಲಿ ಉಲ್ಲೇಖಿಸಲಾಗಿದೆ. 

ಪೊಲೀಸರು ಗಿರೀಶ್ ಮತ್ತು ಆತನ ಮೂವರು ಸ್ನೇಹಿತರ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT