ಸಾಂದರ್ಭಿಕ ಚಿತ್ರ 
ರಾಜ್ಯ

ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕನ ವಿರುದ್ಧ ವಂಚನೆ, ಬೆದರಿಕೆ ಆರೋಪ

ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ಕಮ್ ನಿರ್ದೇಶಕ ರೂಪೇಶ್ ಜಿ ರಾಜ್ ಅವರು ಕೆಲವು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿರುವ ತಮ್ಮ ಸಹೋದರ ಗಿರೀಶ್ ಜಿ ರಾಜ್ ವಿರುದ್ಧ ದೂರು ದಾಖಲಿಸಿದ್ದಾರೆ. 

ಕೆಲವು ವರ್ಷಗಳ ಹಿಂದೆ ಸಿನಿಮಾ ನಿರ್ಮಾಣಕ್ಕಾಗಿ ತನ್ನ ಸಹೋದರ ತನ್ನಿಂದ 33 ಲಕ್ಷ ಮತ್ತು ತನ್ನ ಮೂವರು ಸ್ನೇಹಿತರಿಂದ 1.10 ಕೋಟಿ ಸಾಲ ಪಡೆದು, ಅದನ್ನು ಹಿಂದಿರುಗಿಸುವ ಭರವಸೆ ನೀಡಿದ್ದರು ರೂಪೇಶ್ ದೂರಿನಲ್ಲಿ ತಿಳಿಸಿದ್ದಾರೆ.

ಆದರೂ ಮರುಪಾವತಿ ಮಾಡದ ಕಾರಣ, ಸಾಲ ತೀರಿಸುವಂತೆ ರೂಪೇಶ್ ಅವರ ಮನೆಗೆ ಭೇಟಿ ನೀಡಿದಾಗ ಬೆದರಿಕೆ ಹಾಕಿದ್ದರು. ಗಿರೀಶ್ ಅವರ ಸ್ನೇಹಿತರು ಕೂಡ ರೂಪೇಶ್‌ಗೆ ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಅವರು ತಮ್ಮ ಸಹೋದರನಿಗೆ ಯಾವುದೇ ಹಣವನ್ನು ಸಾಲವಾಗಿ ನೀಡಿಲ್ಲ ಎಂದು ಲಿಖಿತವಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ ಎಂದು ದೂರಿಲ್ಲಿ ಉಲ್ಲೇಖಿಸಲಾಗಿದೆ. 

ಪೊಲೀಸರು ಗಿರೀಶ್ ಮತ್ತು ಆತನ ಮೂವರು ಸ್ನೇಹಿತರ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT