ಸಂಗ್ರಹ ಚಿತ್ರ 
ರಾಜ್ಯ

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ: 'ಶಕ್ತಿ' ಬಸ್ ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ಚಾಲಕನ ಸಮಯಪ್ರಜ್ಞೆಯಿಂದಾಗಿ ಚಿತ್ರದುರ್ಗದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿದೆ.

ಚಿತ್ರದುರ್ಗ: ಚಾಲಕನ ಸಮಯಪ್ರಜ್ಞೆಯಿಂದಾಗಿ ಚಿತ್ರದುರ್ಗದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿದೆ.

‘ಶಕ್ತಿ’ ಯೋಜನೆಗೆ ಅಲಂಕೃತಗೊಂಡಿದ್ದ ಕೆಎಸ್‌ಆರ್‌ಟಿಸಿ ಬಸ್ ಚಿತ್ರದುರ್ಗದಿಂದ ಬೆಂಗಳೂರಿಗೆ ಹೊರಟಿತ್ತು. ಬಸ್ ಚಾಲಕ ಲಾರಿಯನ್ನು ಹಿಂದಿಕ್ಕಲು ಯತ್ನಿಸಿದ್ದಾನೆ. ಈ ವೇಳೆ ಲಾರಿ ಚಾಲಕ ಯಾವುದೇ ಸೂಚನೆ ನೀಡದೆ ಲಾರಿಯನ್ನು ಬಸ್ ಬರುತ್ತಿದ್ದ ರಸ್ತೆಯ ಬದಿಗೆ ತಿರುಗಿಸಿದ್ದಾನೆ.

ಅಪಾಯವನ್ನು ಅರಿತ ಕೆಎಸ್‌ಆರ್‌ಟಿಸಿ ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾನೆ. ಲಾರಿ ಮತ್ತು ರಸ್ತೆಯ ಗೋಡೆಯ ನಡುವೆ ಸಿಲುಕಿಕೊಡಿದೆ. ಆದರೆ, ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಇಬ್ಬರೂ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!