ಸಂಗ್ರಹ ಚಿತ್ರ 
ರಾಜ್ಯ

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ: 'ಶಕ್ತಿ' ಬಸ್ ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ಚಾಲಕನ ಸಮಯಪ್ರಜ್ಞೆಯಿಂದಾಗಿ ಚಿತ್ರದುರ್ಗದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿದೆ.

ಚಿತ್ರದುರ್ಗ: ಚಾಲಕನ ಸಮಯಪ್ರಜ್ಞೆಯಿಂದಾಗಿ ಚಿತ್ರದುರ್ಗದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿದೆ.

‘ಶಕ್ತಿ’ ಯೋಜನೆಗೆ ಅಲಂಕೃತಗೊಂಡಿದ್ದ ಕೆಎಸ್‌ಆರ್‌ಟಿಸಿ ಬಸ್ ಚಿತ್ರದುರ್ಗದಿಂದ ಬೆಂಗಳೂರಿಗೆ ಹೊರಟಿತ್ತು. ಬಸ್ ಚಾಲಕ ಲಾರಿಯನ್ನು ಹಿಂದಿಕ್ಕಲು ಯತ್ನಿಸಿದ್ದಾನೆ. ಈ ವೇಳೆ ಲಾರಿ ಚಾಲಕ ಯಾವುದೇ ಸೂಚನೆ ನೀಡದೆ ಲಾರಿಯನ್ನು ಬಸ್ ಬರುತ್ತಿದ್ದ ರಸ್ತೆಯ ಬದಿಗೆ ತಿರುಗಿಸಿದ್ದಾನೆ.

ಅಪಾಯವನ್ನು ಅರಿತ ಕೆಎಸ್‌ಆರ್‌ಟಿಸಿ ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾನೆ. ಲಾರಿ ಮತ್ತು ರಸ್ತೆಯ ಗೋಡೆಯ ನಡುವೆ ಸಿಲುಕಿಕೊಡಿದೆ. ಆದರೆ, ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಇಬ್ಬರೂ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT