ಶಾಸಕಿ ರೂಪಕಲಾ 
ರಾಜ್ಯ

ಶಕ್ತಿ ಯೋಜನೆಗೆ ಚಾಲನೆ: ಬಸ್ ಚಲಾಯಿಸಿದ ಕೆಜಿಎಫ್ ಶಾಸಕಿ ರೂಪಕಲಾ

ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಗೆ ಕೋಲಾರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ‌ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದ್ದು, ಈ ವೇಳೆ ರಾಬರ್ಟಸನ್‌ಪೇಟೆಯ ಕುವೆಂಪು ಬಸ್‌ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಚಲಾಯಿಸಿ ನೆರೆದಿದ್ದವರ ಗಮನ ಸೆಳೆದರು.

ಕೆಜಿಎಫ್ (ಕೋಲಾರ): ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಗೆ ಕೋಲಾರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ‌ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದ್ದು, ಈ ವೇಳೆ ರಾಬರ್ಟಸನ್‌ಪೇಟೆಯ ಕುವೆಂಪು ಬಸ್‌ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಚಲಾಯಿಸಿ ನೆರೆದಿದ್ದವರ ಗಮನ ಸೆಳೆದರು.

ಶಕ್ತಿ ಯೋಜನೆಗೆ ಶಾಸಕಿ ರೂಪಕಲಾ ಚಾಲನೆ ನೀಡುತ್ತಿದ್ದಂತೆ, ಅಲ್ಲಿದ್ದ ಕಾರ್ಯಕರ್ತರು ಬಸ್ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ. ಕೊನೆಗೆ ಎಲ್ಲರ ಒತ್ತಾಯಕ್ಕೆ ಮಣಿದ ಶಾಸಕಿ ಬಸ್ ಚಲಾಯಿಸಲು ಮುಂದಾದರು.

ಎರಡು ಬಾರಿ ಗೇರ್ ಸರಿಯಾಗಿ ಬೀಳದ ಕಾರಣ ಬಸ್ಸು ಹಿಮ್ಮುಖವಾಗಿ ಚಲಿಸಿತು. ಸ್ವಲ್ಪದರಲ್ಲಿಯೇ ಹಿಂಭಾಗದಲ್ಲಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗುವುದು ತಪ್ಪಿತು. ಈ ಸಂದರ್ಭದಲ್ಲಿ ಶಾಸಕಿಗೆ ಬಸ್ಸಿನ ಚಾಲಕ ಮಾರ್ಗದರ್ಶನ ಮಾಡಿದರು.

ನಂತರ ಶಾಸಕಿ ಬಸ್‌ನಲ್ಲಿ ಕುಳಿತು ಸ್ವಲ್ಪ ದೂರ ಪ್ರಯಾಣ ಮಾಡಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT