ಬೆಂಗಳೂರು ವಿವಿ 
ರಾಜ್ಯ

ದಾಖಲೆ ಬರೆದ ಬೆಂಗಳೂರು ವಿವಿ: ನ್ಯಾಕ್ ಎ++ ಶ್ರೇಣಿ, ರಾಜ್ಯದ ಏಕೈಕ, ದೇಶದ 2ನೇ ಸರ್ಕಾರಿ ವಿವಿ

ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯ ಐತಿಹಾಸಿಕ ಸಾಧನೆಗೈದಿದ್ದು, ನ್ಯಾಕ್ ಎ++ ಶ್ರೇಣಿ ಪಡೆಯುವ ಮೂಲಕ ಈ ಕೀರ್ತಿಗೆ ಭಾಜನವಾದ ರಾಜ್ಯದ ಮೊದಲ ಮತ್ತು ದೇಶದ 2ನೇ ಸರ್ಕಾರಿ ವಿವಿ ಎಂಬ ಕೀರ್ತಿಗೆ ಭಾಜನವಾಗಿದೆ.

ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯ ಐತಿಹಾಸಿಕ ಸಾಧನೆಗೈದಿದ್ದು, ನ್ಯಾಕ್ ಎ++ ಶ್ರೇಣಿ ಪಡೆಯುವ ಮೂಲಕ ಈ ಕೀರ್ತಿಗೆ ಭಾಜನವಾದ ರಾಜ್ಯದ ಮೊದಲ ಮತ್ತು ದೇಶದ 2ನೇ ಸರ್ಕಾರಿ ವಿವಿ ಎಂಬ ಕೀರ್ತಿಗೆ ಭಾಜನವಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯವು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಪೈಕಿ ‘ಎ++’ ಶ್ರೇಣಿ ಪಡೆದ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದಲ್ಲಿ ಜೆಎನ್‌ಯು (ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ) ನಂತರ ಈ ಸಾಧನೆ ಮಾಡಿದ ಸರ್ಕಾರಿ ವಿಶ್ವವಿದ್ಯಾಲಯ ಎಂಬ ಕೀರ್ತಿಗೆ ಇದೀಗ ಬೆಂಗಳೂರು ವಿವಿ ಪಾತ್ರವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ವಿವಿ ಕುಲಪತಿ ಡಾ. ಎಸ್.ಎಂ. ಜಯಕರ್ ಅವರು, '‘ವಿಶ್ವವಿದ್ಯಾಲಯವು 2018ರಿಂದ 2022ರವರೆಗಿನ ಮೌಲ್ಯಮಾಪನ ಅವಧಿಯ ಸ್ವಯಂ ಅಧ್ಯಯನ ವರದಿಯನ್ನು ನ್ಯಾಕ್‌ಗೆ ಸಲ್ಲಿಸಿತ್ತು. ದೇಶದ ಕೆಲವೇ ಶೈಕ್ಷಣಿಕ ಸಂಸ್ಥೆಗಳು ನಾಲ್ಕನೇ ಆವೃತ್ತಿಗೆ ಮಂಡಳಿಯಿಂದ ಮಾನ್ಯತೆ ಪ‍ಡೆದಿವೆ. ಇವುಗಳಲ್ಲಿ ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ನಂತರ ದೇಶದಲ್ಲಿ ಮೊದಲ ಬಾರಿಗೆ ಈ ಸಾಧನೆಗೈದಿರುವುದು ಬೆಂಗಳೂರು ವಿಶ್ವವಿದ್ಯಾಲಯ ಎಂಬುದು ಹೆಮ್ಮೆಯ ವಿಷಯ. ಈ ಮೂಲಕ ವಿಶ್ವವಿದ್ಯಾಲಯವು ಸಂಪೂರ್ಣ ಸ್ವಾಯತ್ತತೆಯನ್ನು ಪ‍ಡೆಯುವ ಅವಕಾಶ ಪಡೆದುಕೊಂಡಿದೆ’ ಎಂದು ತಿಳಿಸಿದರು.

ಅಂತೆಯೇ ‘ನ್ಯಾಕ್‌ ನಿಗದಿಪಡಿಸಿದ ಮಾನದಂಡಗಳಾದ ಪಠ್ಯಕ್ರಮ, ಬೋಧನೆ ಹಾಗೂ ಕಲಿಕೆ, ಮೌಲ್ಯಮಾಪನ, ಸಂಶೋಧನೆ, ಮೂಲಸೌಕರ್ಯ, ಕಲಿಕಾ ಸಂಪನ್ಮೂಲ, ವಿದ್ಯಾರ್ಥಿಗಳ ಪ್ರಗತಿ, ಆಡಳಿತ ಮತ್ತು ನಿರ್ವಹಣೆ, ಸಾಂಸ್ಥಿಕ ಮೌಲ್ಯಗಳಲ್ಲಿ ವಿಶ್ವವಿದ್ಯಾಲಯವು ಗರಿಷ್ಠ 4 ಅಂಕಗಳಲ್ಲಿ 3.75 ಅಂಕಗಳನ್ನು ಪಡೆದುಕೊಂಡಿದೆ. ಐದು ವರ್ಷಗಳವರೆಗೆ ಈ ಮಾನ್ಯತೆ ಇರಲಿದೆ. ನ್ಯಾಕ್‌ ತಂಡವು ಮೇ 17ರಿಂದ 19ರವರೆಗೆ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಇಲ್ಲಿನ ಸೌಕರ್ಯ ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿತ್ತು’ ಎಂದು ಅವರು ತಿಳಿಸಿದರು.

‘ಕಳೆದ ಐದು ವರ್ಷಗಳಲ್ಲಿ ಶೈಕ್ಷಣಿಕ ಮತ್ತು ಮೂಲ ಸೌಕರ್ಯಕ್ಕೆ ಸಂಬಂಧಿಸಿದ ವಿವಿಧ ಕಾರ್ಯಗಳ ಮೂಲಕ ವಿವಿಯು ಶೈಕ್ಷಣಿಕ ಉತ್ಕೃಷ್ಟತೆಯನ್ನು ಸಾಧಿಸಿದೆ. ಹಿಂದಿನ ಎರಡು ಆವೃತ್ತಿಗಳಲ್ಲಿ 3.16 ಸಿಜಿಪಿಎಯೊಂದಿಗೆ ನ್ಯಾಕ್‌ನಿಂದ ಎ ಶ್ರೇಣಿ ಪಡೆದಿತ್ತು. ಹಲವು ಆಯಾಮಗಳಲ್ಲಿ ವಿವಿಯು ತನ್ನ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಂಡ ಪರಿಣಾಮ ಎ ಪ್ಲಸ್‌ ಪ್ಲಸ್‌ ಶ್ರೇಣಿ ಪಡೆಯಲು ಸಾಧ್ಯವಾಗಿದೆ’ ಎಂದು ಡಾ. ಎಸ್.ಎಂ. ಜಯಕರ್ ತಿಳಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!