ಡಿ ಕೆ ಶಿವಕುಮಾರ್, ನಿರ್ದೇಶಕ ಶಶಾಂಕ್(ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಕುರಿತು ಡಿಸಿಎಂಗೆ ನಿರ್ದೇಶಕ ಶಶಾಂಕ್ ಬಹಿರಂಗ ಪತ್ರ

ರಾಜಧಾನಿ ಬೆಂಗಳೂರು ಮಳೆಗಾಲದಲ್ಲಿ ಪ್ರವಾಹ, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗದಿರುವುದು, ವರ್ಷಪೂರ್ತಿ ಸಂಚಾರ ದಟ್ಟಣೆ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳಿಂದ ನಲುಗಿ ಹೋಗುತ್ತಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಮಳೆಗಾಲದಲ್ಲಿ ಪ್ರವಾಹ, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗದಿರುವುದು, ವರ್ಷಪೂರ್ತಿ ಸಂಚಾರ ದಟ್ಟಣೆ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳಿಂದ ನಲುಗಿ ಹೋಗುತ್ತಿದೆ.

ಈ ನಿಟ್ಟಿನಲ್ಲಿ ಬೆಂಗಳೂರಿಗೆ ತುರ್ತು ಆಗಬೇಕಾದ ಎರಡು ಯೋಜನೆಗಳನ್ನು ಶೀಘ್ರ ನೆರವೇರಿಸಿದರೆ ಬಹುತೇಕ ಕನ್ನಡಿಗರಿಗೆ ಅನುಕೂಲವಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಗಮನಕ್ಕೆ ತಂದಿದ್ದಾರೆ ಕನ್ನಡದ ನಿರ್ದೇಶಕ ಶಶಾಂಕ್.

ನೆಲಮಂಗಲ ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಜಂಕ್ಷನ್ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಹೋಗಲು ಹೆಬ್ಬಾಗಿಲು. ಇಲ್ಲಿ ಸಂಚಾರ ದಟ್ಟಣೆ ಸಮಸ್ಯೆ ತೀವ್ರವಾಗಿದ್ದು ಇದಕ್ಕೆ ಪರಿಹಾರ ಕಲ್ಪಿಸಬೇಕು. ಎರಡನೆಯದಾಗಿ ನೆಲಮಂಗಲ ಫ್ಲೈ ಓವರ್ ಮೇಲಿನ ಹೊರೆತಗ್ಗಿಸಲು ಅಭಿವೃದ್ಧಿಪಡಿಸಲಾಗುತ್ತಿರುವ ಮಾಗಡಿ ರಸ್ತೆ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತಗೊಂಡರೆ ಗೊರಗುಂಟೆ ಪಾಳ್ಯ ಜಂಕ್ಷನ್ ನಂತೆ ಸುಂಕದಕಟ್ಟೆ ಆಗಿ ಅಲ್ಲಿ ಕೂಡ ಸಂಚಾರ ದಟ್ಟಣೆಯಾಗುವುದು ಖಂಡಿತ. ಅದಕ್ಕೆ ಈಗಲೇ  ಪರಿಹಾರ ಕಂಡುಕೊಳ್ಳಬೇಕು ಎಂದು ಡಿಸಿಎಂನ್ನು ಒತ್ತಾಯಿಸಿದ್ದಾರೆ.

ಬೆಂಗಳೂರನ್ನು ಕರ್ನಾಟಕದ ಬಹುತೇಕ ಭಾಗಗಳಿಗೆ ಸಂಪರ್ಕಿಸುವ ಮತ್ತು ಅತಿ ಹೆಚ್ಚು ಕನ್ನಡಿಗರು ವಾಸಿಸುವ ಈ ಭಾಗ ಸಮಸ್ಯೆಯನ್ನು ಬಗೆಹರಿಸಿದರೆ ಕನ್ನಡಿಗರಿಗೆ ಸರ್ಕಾರದ ಬಹುದೊಡ್ಡ ಕೊಡುಗೆಯಾಗುತ್ತದೆ ಮಾತ್ರವಲ್ಲದೆ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಯನ್ನು ಅರ್ಧಕ್ಕರ್ಧ ಕಡಿಮೆ ಮಾಡಿದಂತಾಗುತ್ತದೆ ಎಂದು ಪತ್ರದ ಮೂಲಕ ತಮ್ಮ ಅಭಿಪ್ರಾಯವನ್ನು ನಿರ್ದೇಶಕರು ಹೊರಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT