ಸಾಹಿತಿ ಕುಂ ವೀರಭದ್ರಪ್ಪ 
ರಾಜ್ಯ

ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪಗೆ 16 ಕೊಲೆ ಬೆದರಿಕೆ ಪತ್ರ: ಭದ್ರತೆ ಒದಗಿಸಿದ ಪೊಲೀಸರು

ಕನ್ನಡದ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ 16 ಕೊಲೆ ಬೆದರಿಕೆ ಪತ್ರಗಳು ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ಬುಧವಾರ ತಿಳಿಸಿದ್ದಾರೆ.

ವಿಜಯನಗರ: ಕನ್ನಡದ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ 16 ಕೊಲೆ ಬೆದರಿಕೆ ಪತ್ರಗಳು ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಲೋಕದಲ್ಲಿ ಕುಂವೀ ಎಂದೇ ಹೆಸರಾಗಿರುವ ವೀರಭದ್ರಪ್ಪ ಅವರ ಕಾವಲಿಗೆ ಜಿಲ್ಲಾ ಪೊಲೀಸ್ ಮೀಸಲು ಪಡೆ ಶಸ್ತ್ರಸಜ್ಜಿತ ಪೇದೆಯನ್ನು ನಿಯೋಜಿಸಿದೆ ಎಂದು ಹೇಳಿದರು.

'ಒಬ್ಬ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಮತ್ತು ಆತನ ಕೈಬರಹದ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸ್ ರಕ್ಷಣೆ ಕುರಿತು ಮಾತನಾಡಿದ ವೀರಭದ್ರಪ್ಪ, ‘ಬೆದರಿಕೆಗಳ ಬಗ್ಗೆ ಹೆಚ್ಚು ಗಮನ ಹರಿಸಿಲ್ಲ, ಪುಸ್ತಕ ಬರೆಯುವ ಕೆಲಸದಲ್ಲಿ ತೊಡಗಿದ್ದೇನೆ’ ಎಂದು ಮಾಧ್ಯಮಗಳಿಗೆ ತಿಳಿಸಿದರು.

ಹೆಚ್ಚುತ್ತಿರುವ ಅಸಹಿಷ್ಣುತೆ, ಸಂವಿಧಾನ ಮತ್ತು ಜಾತ್ಯತೀತತೆಗೆ ಬೆದರಿಕೆಯನ್ನು ವಿರೋಧಿಸಿ ವೀರಭದ್ರಪ್ಪ ಅವರು 2008ರಲ್ಲಿ ತಮ್ಮ ‘ಅರಮನೆ’ ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿಯಿಂದ ನೀಡಲಾದ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು. ತಾನು ಲಿಂಗಾಯತನೇ ಹೊರತು ಹಿಂದೂ ಅಲ್ಲ ಎಂದು ಘೋಷಿಸಿದ್ದರು.

ಲೇಖಕಿ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಮತ್ತು ಪ್ರೊ. ಎಂಎಂ ಕಲಬುರ್ಗಿ ಅವರ ಭೀಕರ ಹತ್ಯೆಗಳ ಹಿನ್ನೆಲೆಯಲ್ಲಿ ಅವರಿಗೆ ಜೀವ ಬೆದರಿಕೆಯ ಬೆಳವಣಿಗೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಸಾಹಿತಿ ವೀರಭದ್ರಪ್ಪ ಅವರು ಹಿಜಾಬ್ ನಿಷೇಧ ಮತ್ತು ಹಲಾಲ್ ಮಾಂಸ ಮತ್ತು ಮುಸ್ಲಿಂ ಮಾವು ಮಾರಾಟಗಾರರ ಮೇಲಿನ ಬಹಿಷ್ಕಾರ ಕರೆಗಳಂತಹ ವಿಷಯಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಬೆಂಬಲ ನೀಡಿದ್ದಾರೆ.

ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಮೌನವಹಿಸಿದ ಸಾಹಿತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಯಾವುದೇ ಬರಹಗಾರನಿಗೆ ಅವನ/ಆಕೆಯ ಜೀವಕ್ಕಿಂತ ಸಮಾಜದ ಸ್ವಾಸ್ಥ್ಯ ಮುಖ್ಯ ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT