ಶಕ್ತಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ರಾಜ್ಯ

'ಶಕ್ತಿ' ಯೋಜನೆ: ಮೂರು ದಿನಗಳಲ್ಲಿ ಸುಮಾರು 1 ಕೋಟಿ ಮಹಿಳೆಯರು ಉಚಿತ ಪ್ರಯಾಣ, ಟಿಕೆಟ್ ವೆಚ್ಚ 21.06 ಕೋಟಿ ರೂ.!

ರಾಜ್ಯದಲ್ಲಿ ಅಧಿಕಾರಕ್ಕೇರಿದರೆ ಈಡೇರಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್, ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ 'ಶಕ್ತಿ' ಯೋಜನೆಗೆ ಜೂನ್ 11ರಂದು ಚಾಲನೆ ನೀಡಿದೆ. ಅದರಂತೆ ಮೂರನೇ ದಿನವಾದ ಮಂಗಳವಾರ ಬರೋಬ್ಬರಿ 51.53 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೇರಿದರೆ ಈಡೇರಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್, ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ 'ಶಕ್ತಿ' ಯೋಜನೆಗೆ ಜೂನ್ 11ರಂದು ಚಾಲನೆ ನೀಡಿದೆ. ಅದರಂತೆ ಮೂರನೇ ದಿನವಾದ ಮಂಗಳವಾರ ಬರೋಬ್ಬರಿ 51.53 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರ ಪ್ರಯಾಣದ ವೆಚ್ಚ 10.82 ಕೋಟಿ ರೂ. ಆಗಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಯೋಜನೆಯ ಮೂರನೇ ದಿನವಾದ ಮಂಗಳವಾರ 20.57 ಲಕ್ಷ ಜನರು ಬೆಂಗಳೂರು ಸಿಟಿ ಬಸ್‌ಗಳಲ್ಲಿ ಉಚಿತ ಸವಾರಿ ಮಾಡಿದ್ದಾರೆ. ಇದರ ಪ್ರಯಾಣ ವೆಚ್ಚ 2.02 ಕೋಟಿ ರೂ. ಆಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ 13.98 ಲಕ್ಷ ಮಹಿಳೆಯರು ಪ್ರಯಾಣಿಸಿದ್ದು, ಇದರ ವೆಚ್ಚ ಗರಿಷ್ಠ 4.12 ಕೋಟಿ ರೂ. ಆಗಿದೆ. ಇನ್ನುಳಿದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ 11.09 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ 5.89 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. 

ಇದರ ಪ್ರಯಾಣ ವೆಚ್ಚ ಕ್ರಮವಾಗಿ 2.72 ಕೋಟಿ ರೂ. ಮತ್ತು 1.95 ಕೋಟಿ ರೂ. ಆಗಿದೆ. ರಾಜ್ಯದಾದ್ಯಂತ ಮಹಿಳೆಯರ ಉಚಿತ ಪ್ರಯಾಣದ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ.

ರಾಜ್ಯದಲ್ಲಿ ಕಾಂಗ್ರೆಸ್‌ನ ಪ್ರಮುಖ ಚುನಾವಣಾ ಪೂರ್ವ ಭರವಸೆಯಾದ 'ಶಕ್ತಿ ಯೋಜನೆ'ಗೆ ಚಾಲನೆ ಸಿಕ್ಕ ಕೇವಲ ಮೂರು ದಿನಗಳಲ್ಲಿ 98,58,518 ಮಹಿಳೆಯರು ರಾಜ್ಯದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದರ ಒಟ್ಟು ಪ್ರಯಾಣದ ವೆಚ್ಚ 21.06 ಕೋಟಿ ರೂ. ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT