ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಜೆಟ್ ತಯಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಬ್ಯುಸಿ: ಅಧಿಕಾರಿಗಳೊಂದಿಗೆ ಸರಣಿ ಸಭೆ

ಬಹುನಿರೀಕ್ಷಿತ ರಾಜ್ಯ ಬಜೆಟ್ ಜುಲೈ 7 ರಂದು ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ತಯಾರಿಯಲ್ಲಿ ಕಾರ್ಯಮಗ್ನರಾಗಿದ್ದಾರೆ.

ಬೆಂಗಳೂರು: ಬಹುನಿರೀಕ್ಷಿತ ರಾಜ್ಯ ಬಜೆಟ್ ಜುಲೈ 7 ರಂದು ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ತಯಾರಿಯಲ್ಲಿ ಕಾರ್ಯಮಗ್ನರಾಗಿದ್ದಾರೆ.

ನಿನ್ನೆಯಿಂದ ಮುಖ್ಯಮಂತ್ರಿಗಳು ಬಜೆಟ್ ತಯಾರಿ ಆರಂಭಿಸಿದ್ದು, ಇದರಂತೆ 14 ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಮುಖ್ಯಸ್ಥರೊಂದಿಗೆ ಸರಣಿ ಸಭೆಗಳನ್ನು ನಡೆಸಿದರು.

ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ, ಪರಿಸರ ಮತ್ತು ಜೀವಶಾಸ್ತ್ರ, ಜಲಸಂಪನ್ಮೂಲ, ಸಣ್ಣ ನೀರಾವರಿ, ಅರಣ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಸಿಬ್ಬಂದಿ, ಆಡಳಿತ ಸುಧಾರಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಗಳ ಜತೆ ನಿನ್ನೆ ಸಭೆಗಳನ್ನು ನಡೆಸಿದರು.

ಈ ವೇಳೆ ರಾಜ್ಯ ಸರ್ಕಾರದ ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ಕೇಂದ್ರದ ಯೋಜನೆಗಳ ಬಗ್ಗೆ ಮಾಹಿತಿ ಮಾಹಿತಿ ಪಡೆದುಕೊಂಡರು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹಣವನ್ನು ಯಾವ ರೀತಿಯಲ್ಲಿ ಉಳಿತಾಯ ಮಾಡಬಹುದು ಎಂಬುದನ್ನೂ ಚರ್ಚೆ ನಡೆಸಿದರು.

ಮುಖ್ಯವಾಗಿ ಹಳೆಯ ಯೋಜನೆಗಳನ್ನು ಮುಂದುವರಿಸಲು ವಿವಿಧ ಮೂಲಗಳಿಂದ ಆದಾಯವನ್ನು ಗಳಿಸುವುದು ಮತ್ತು ಐದು ಗ್ಯಾರಂಟಿ ಯೋಜನೆಗಳ ಕಾರ್ಯಗತಗೊಳಿಸುವ ಕುರಿತಂತೆಯೂ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಇಂದು ಸಂಪನ್ಮೂಲ ಕ್ರೋಡೀಕರಣ ಇಲಾಖೆಗಳಾದ ಸಾರಿಗೆ, ಕಂದಾಯ, ಕೈಗಾರಿಕೆ, ವಾಣಿಜ್ಯ ತೆರಿಗೆ, ಸಹಕಾರ, ಸೇರಿದಂತೆ ಇತರ ಇಲಾಖೆಗಳ ಜತೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಬಜೆಟ್ ಬಹುನಿರೀಕ್ಷೆ ಹುಟ್ಟಿಸಿದ್ದು, ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳ ಜತೆ ಸಂಪನ್ಮೂಲ ಕ್ರೋಡೀಕರಣ ಹಾಗೂ ಆಯವ್ಯಯದ ಸವಾಲಿಗೆ ಉತ್ತರ ನೀಡುವ ಅನಿವಾರ್ಯತೆ ಇದೆ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ-Video

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ ಇಂದಿನ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್ !

'ಪುರುಷ ಸಲಿಂಗಿ'ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್ ಕಳವಳ!

ತಾಂತ್ರಿಕ ದೋಷ: ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು! ಪರದಾಡಿದ ಪ್ರಯಾಣಿಕರು-Video

ಮಹಿಳಾ ವಿಶ್ವಕಪ್ ಗೆದ್ದ ಬಳಿಕ ಹರ್ಮನ್ ಪ್ರೀತ್ ಕೌರ್ ಗೆ ಮತ್ತೊಂದು 'ಜಾಕ್ ಪಾಟ್'! Video

SCROLL FOR NEXT