ಎಚ್.ಕೆ ಪಾಟೀಲ್ 
ರಾಜ್ಯ

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿ​ಎಂಸಿ ಕಾಯ್ದೆ ರದ್ದ​ತಿಗೆ ನಿರ್ಧಾ​ರ: ಸಚಿವ ಎಚ್‌.ಕೆ. ಪಾಟೀಲ್‌

ನಿಕಟಪೂರ್ವ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆ ಬದಲು ಹಳೆಯ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಈಗಿನ ಕಾಂಗ್ರೆಸ್‌ ಸರ್ಕಾರ ಬಂದಿದೆ.

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ಕರ್ನಾಟಕ ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಿಕಟಪೂರ್ವ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆ ಬದಲು ಹಳೆಯ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಈಗಿನ ಕಾಂಗ್ರೆಸ್‌ ಸರ್ಕಾರ ಬಂದಿದೆ.

ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಕಾಯ್ದೆಯ ಬದಲಾಗಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಮೂಲ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಜು. 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಸದರಿ ಸುಧಾರಿತ ಎಪಿಎಂಸಿ ಮದೂ​ದೆ ಮಂಡಿಸಲು ತೀರ್ಮಾನಿಸಿದೆ.

ಹಾಲಿ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡಿ ಮೂಲ ಎಪಿಎಂಸಿ ಕಾಯ್ದೆಯ ಸುಧಾರಿತ ಸ್ವರೂಪದಲ್ಲಿ ಜಾರಿಗೊಳಿಸುವ ಸಂಬಂಧ ಜವಳಿ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಬುಧವಾರ ಉನ್ನತ ಮಟ್ಟದ ಸಭೆ ನಡೆ​ಸಿ​ದರು. ಈ ಸಭೆಯಲ್ಲಿ ಸುಧಾರಿತ ಕಾಯ್ದೆ ಜಾರಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌.ಕೆ. ಪಾಟೀಲ್‌ ಹಾಗೂ ಶಿವಾನಂದ ಪಾಟೀಲ ಅವರು, ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಮೂಲ ಕರ್ನಾಟಕ ಎಪಿಎಂಸಿ ಕಾಯ್ದೆಯ ಎಲ್ಲ ಆಶಯಗಳನ್ನು ಹೊಂದಿರುವ ಸುಧಾರಿತ ಎಪಿಎಂಸಿ ಮಸೂ​ದೆಯನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದರು.

ಸುಧಾರಿತ ಎಪಿಎಂಸಿ ಕಾಯ್ದೆಯನ್ನು ಜಾರಿಗೊಳಿಸುವಾಗ, ರೈತರ ಹಿತವನ್ನು ಗಮನದಲ್ಲಿಟ್ಟುಕೊಳ್ಳಲಾಗುತ್ತದೆ. ಅವರ ಅಗತ್ಯಗಳಿಗೆ ಅನುಗುಣವಾಗಿ ಹಳೆಯ ಎಪಿಎಂಸಿ ಕಾಯ್ದೆಗೆ ಪರಿಷ್ಕರಣೆ ತಂದು ಜಾರಿಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT