ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಬುಧವಾರ ಪಾವಗಡ ಸೋಲಾರ್ ಪಾರ್ಕ್ ವೈಮಾನಿಕ ಸಮೀಕ್ಷೆ ನಡೆಸಿದರು. 
ರಾಜ್ಯ

ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ ಶಿವಕುಮಾರ್

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧವಾಗಿದ್ದು, 10,000 ಎಕರೆ ಭೂಮಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ತುಮಕೂರು: ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧವಾಗಿದ್ದು, 10,000 ಎಕರೆ ಭೂಮಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ನಿನ್ನೆಯಷ್ಟೇ ತುಮಕೂರಿನ ಪಾವಗಡ ತಾಲೂಕು ತಿರುಮಣಿಯಲ್ಲಿರುವ ಏಷ್ಯಾದ ಅತಿದೊಡ್ಡ ಸೋಲಾರ್‌ ಪಾರ್ಕ್'ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ರೈತರು ತಮ್ಮ ಭೂಮಿಯನ್ನು ಬಿಟ್ಟುಕೊಡಲು ಸಿದ್ಧರಾಗಿದ್ದೇ ಆದರೆ, ಅದು ಅವರಿಗೆ ಮಾತ್ರವಲ್ಲ ಸೌರ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೂ ಸಹಾಯ ಮಾಡುತ್ತದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಉದ್ಘಾಟನೆಯಾದಾಗ ಏಷ್ಯಾದಲ್ಲೇ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ, ಇಂದು ಆ ಹೆಗ್ಗಳಿಕೆ ಇಲ್ಲ. ಮತ್ತೊಮ್ಮೆ ಈ ಸೋಲಾರ್ ಪಾರ್ಕ್'ನ್ನು ನಂಬರ್ 1 ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಅದಕ್ಕಾಗಿ ಸೋಲಾರ್ ಪಾರ್ಕ್ ವಿಸ್ತರಣೆ ಮಾಡಬೇಕಾಗಿದೆ ಎಂದು ಹೇಳಿದರು.

ಸೋಲಾರ್‌ ಪ್ಯಾನೆಲ್‌ನಿಂದಾಗಿ ರೈತರು ಆರೋಗ್ಯ ಸಮಸ್ಯೆಯಿಂದ ಎದುರಿಸುತ್ತಿರುವ ಬಗ್ಗೆ ಪ್ರತಿಕ್ರಿಯಿ, ಇದು ಕೇವಲ ಅಪನಂಬಿಕೆಗಳಷ್ಟೇ ಎಂದು ತಿಳಿಸಿದರು.

ಇದಕ್ಕೂ ಡಿಕೆ.ಶಿವಕುಮಾರ್ ಹಾಗೂ ಕೆಜೆ ಜಾರ್ಜ್ ಇಬ್ಬರು ಸೋಲಾರ್ ಪಾರ್ಕ್‌ನ ವೈಮಾನಿಕ ಸಮೀಕ್ಷೆ ನಡೆಸಿ, ನಂತರ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯುತ್ ಉತ್ಪಾದನೆ ಕುರಿತು ಅವಲೋಕನ ನಡೆಸಿದರು.

ಪ್ರಸರಣ ಮತ್ತು ವಿತರಣಾ ನಷ್ಟದ ಬಗ್ಗೆ ತಿಳಿದ ಜಾರ್ಜ್ ಅವರು, ಕೂಡಲೇ ಸಮಸ್ಯೆಯನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT