ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಕತ್ತಿಗೆ ಚೂರಿ ಇರಿದು ಬರ್ಬರ ಹತ್ಯೆ!

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆಕೆಯ ಕತ್ತಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆಕೆಯ ಕತ್ತಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 

ಸಿಂದಗಿ ಪಟ್ಟಣದ ಹೊರವಲಯದಲ್ಲಿ ಟ್ರಾಕ್ಟರ್ ಶೋ ಬಳಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ 28 ವರ್ಷದ ಗಂಗೂಬಾಯಿ ಯಂಕಂಚಿಯನ್ನು ತಡೆದ ದುಷ್ಕರ್ಮಿಗಳು ಆಕೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿ ನಂತರ ಸ್ಕೂಟರ್ ತೆಗೆದುಕೊಂಡು ಪರಾರಿಯಾಗಿದ್ದಾರೆ. 

ಘಟನೆ ವೇಳೆ ಗಂಗೂಬಾಯಿ ಜೊತೆ ಸೋದರ ಸಂಬಂಧಿ ಸಹ ಇದ್ದರು. ಆದರೆ ದುಷ್ಕರ್ಮಿಗಳು ಅಡ್ಡಗಟ್ಟಿ ದಾಳಿ ನಡೆಸುತ್ತಲೆ ಆತ ಭಯದಿಂದ ಅಲ್ಲಿಂದ ಓಡಿ ಹೋಗಿದ್ದನು. ನಂತರ ಪೊಲೀಸರಿಗೆ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ ದಾಳಿ ನಡೆಸಿದ್ದರು ಎಂದು ಮಾಹಿತಿ ನೀಡಿದ್ದಾನೆ. 

ಘಟನಾ ಸ್ಥಳಕ್ಕೆ ಸಿಪಿಐ ಡಿ ಹುಲಗಪ್ಪ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಹಿಜ್ಬೊಲ್ಲಾ ಉಗ್ರ ಸಂಘಟನೆ ಮೇಲೇಳದಂತೆ ಇಸ್ರೇಲ್ ಭೀಕರ ದಾಳಿ: 80ಕ್ಕೂ ಹೆಚ್ಚು ಸ್ಥಳಗಳು ಧ್ವಂಸ

SCROLL FOR NEXT