ರಾಮಲಿಂಗಾ ರೆಡ್ಡಿ 
ರಾಜ್ಯ

ಕಾಶಿ ದರ್ಶನಕ್ಕೆ ರಾಜ್ಯದ 600 ಯಾತ್ರಿಕರನ್ನು ಕಳುಹಿಸಲಾಗುವುದು: ರಾಮಲಿಂಗಾರೆಡ್ಡಿ

ಸರ್ಕಾರದ ಕಾಶಿ ಯಾತ್ರೆ ಯೋಜನೆಯಡಿ ಜುಲೈನಿಂದ ಕರ್ನಾಟಕದ ಯಾತ್ರಾರ್ಥಿಗಳನ್ನು ಕಾಶಿ ದರ್ಶನಕ್ಕೆ ಕಳುಹಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಗುರುವಾರ ಹೇಳಿದರು.

ಬೆಂಗಳೂರು: ಸರ್ಕಾರದ ಕಾಶಿ ಯಾತ್ರೆ ಯೋಜನೆಯಡಿ ಜುಲೈನಿಂದ ಕರ್ನಾಟಕದ ಯಾತ್ರಾರ್ಥಿಗಳನ್ನು ಕಾಶಿ ದರ್ಶನಕ್ಕೆ ಕಳುಹಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಗುರುವಾರ ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಸಚಿವರು, ಜುಲೈ ಎರಡನೇ ವಾರದಿಂದ ಕಾಶಿಗೆ ಒಂದು ಸುತ್ತಿನ ಪ್ರವಾಸಕ್ಕೆ ರಾಜ್ಯದ 600 ಮಂದಿ ಭಕ್ತರನ್ನು ಕಳುಹಿಸಲು ಮುಜರಾಯಿ ಇಲಾಖೆ ಮುಖ್ಯಸ್ಥರು ರೈಲ್ವೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

ಚುನಾವಣಾ ನೀತಿ ಸಂಹಿತೆಯಿಂದಾಗಿ ಏಪ್ರಿಲ್ 14ರಿಂದ ಪ್ರಯಾಗ್‌ರಾಜ್ ಮತ್ತು ಅಯೋಧ್ಯೆ ಒಳಗೊಂಡ ಕಾಶಿ ರೌಂಡ್ ಟ್ರಿಪ್ ಪ್ಯಾಕೇಜ್ ಅನ್ನು ಸರ್ಕಾರ ನಿಲ್ಲಿಸಬೇಕಾಯಿತು. ಇದೀಗ ಯೋಜನೆ ಮರಳಿ ಆರಂಭವಾಗಲಿದೆ ಎಂದು ಮುಜರಾಯಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಿಕೆಟ್ ಕಾಯ್ದಿರಿಸಿದ್ಜ ಪ್ರತಿ ಯಾತ್ರಿಕರಿಗೆ ಇಲಾಖೆಯು 15,000 ರೂ. ಹಿಂದಿರುಗಿಸಿದೆ. ಯಾತ್ರೆಗೆ ಒಟ್ಟು ರೂ.20,000 ವೆಚ್ಚವಾಗಲಿದ್ದು, ಸರ್ಕಾರ ಪ್ರತಿ ಯಾತ್ರಾರ್ಥಿಗೆ ರೂ.5,000 ನೀಡುತ್ತಿದೆ. ಪ್ರವಾಸ ಕೈಗೊಳ್ಳುವ ಇಚ್ಛೆಯುಳ್ಳ ಯಾತ್ರಾರ್ಥಿಗಳು IRCTC ವೆಬ್'ಸೈಟ್'ಗೆ ಭೇಟಿ ನೀಡಿ ರೂ.15,000 ಪಾವತಿಸಿ ಟಿಕೆಟ್ ಬುಕ್ ಮಾಡಬಹುದು. ಮೆಜೆಸ್ಟಿಕ್ ನಿಂದ ರೈಲು ಹೊರಡಲಿದೆ ಎಂದು ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಮುಳಬಾಗಿಲು ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಎಸ್.ವಿಶ್ವನಾಥ ದೀಕ್ಷಿತ್ ಅವರು ಕಾಂಗ್ರೆಸ್ ಸರ್ಕಾರವನ್ನು ಕೊಂಡಾಡಿದ್ದಾರೆ. ಸಾಮರ್ಥ್ಯವಿಲ್ಲದ ಸಾಕಷ್ಟು ಬಡವರಿದ್ದಾರೆ. ಯೋಜನೆ ಮೂಲಕ ಅವರು ಕಾಶಿ ಯಾತ್ರೆ ಮಾಡಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ