ಸಂಗ್ರಹ ಚಿತ್ರ 
ರಾಜ್ಯ

ವೃದ್ದೆ ಮೇಲೆ ಹಲ್ಲೆ, ದರೋಡೆ; ನರ್ಸ್ ಬಂಧನ

ವೃದ್ದೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಚಿನ್ನದ ಸರ ದೋಟಿ ಪರಾರಿಯಾಗಿದ್ದ ನರ್ಸ್ ಒಬ್ಬರನ್ನು ನಂದಿನಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ವೃದ್ದೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಚಿನ್ನದ ಸರ ದೋಟಿ ಪರಾರಿಯಾಗಿದ್ದ ನರ್ಸ್ ಒಬ್ಬರನ್ನು ನಂದಿನಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಲಕ್ಷ್ಮಿ ಅಲಿಯಾಸ್ ಗಂಗಾ (38) ಬಂಧಿತ ನರ್ಸ್. ಶಾಂತಮ್ಮ ಹಲ್ಲೆ ಹಾಗೂ ದರೋಡೆಗೆ ಒಳಗಾದ ವೃದ್ಧ ಮಹಿಳೆಯಾಗಿದ್ದಾರೆ.

ಶಾಂತಮ್ಮ ಅವರು ಲಗ್ಗೆರೆಯಲ್ಲಿ ತಮ್ಮ ಮನೆಯಲ್ಲಿ ಒಂಟಿಯಾಗಿ ವಾಸವಿದ್ದರು. ಬಾಡಿಗೆ ಮನೆಗಳ ಬಗ್ಗೆ ವಿಚಾರಿಸುವ ನೆಪದಲ್ಲಿ ಮಹಿಳೆಯೊಬ್ಬರು ಹಲವು ಬಾರಿ ಶಾಂತಮ್ಮ ಅವರನ್ನು ಸಂಪರ್ಕಿಸಿದ್ದಾರೆ. ಮೇ 25ರಂದು ಮತ್ತೆ ಮನೆಗೆ ಬಂದ ಮಹಿಳೆ ದೊಣ್ಣೆಯಿಂದ ಹೊಡೆದು ಧರಿಸಿದ್ದ ಚಿನ್ನದ ಸರ ದೋಚಿ, ಪರಾರಿಯಾಗಿದ್ದಳು.

ಶಾಂತಮ್ಮ ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಕೊನೆಗೂ ಆರೋಪಿತ ಮಹಿಳೆಯನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧನದ ವೇಳೆ ಕಳವು ಮಾಡಿದ್ದ 80 ಸಾವಿರ ಮೌಲ್ಯದ 20 ಗ್ರಾಂ ಚಿನ್ನದ ಸರ ಕೂಡ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಗಂಗಾ, ಕೋರಮಂಗಲದ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.

ಈ ವರ್ಷದ ಆರಂಭದಲ್ಲಿ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ನಿದ್ರೆ ಬರುವ ಚುಚ್ಚುಮದ್ದು ನೀಡಿ, ಚಿನ್ನದ ಸರವನ್ನು ಕದ್ದಿದ್ದಳು. ಅಶೋಕನಗರ ಪೊಲೀಸರು ಆಕೆಯನ್ನು ಬಂಧನಕ್ಕೊಳಪಡಿಸಿದ್ದರು. ನಂತನ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT