ರಾಜ್ಯ

ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ: ಸುರ್ಜೇವಾಲಾ ಸ್ಪಷ್ಟನೆ

Manjula VN

ಬೆಂಗಳೂರು: ಸಚಿವರು ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಕರ್ನಾಟಕ ಉಸ್ತುವಾರಿ) ರಣದೀಪ್ ಸುರ್ಜೇವಾಲಾ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಕುರಿತು ಎದ್ದಿರುವ ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನಾನಿದ್ದ ಹೋಟೆಲ್'ಗೆ ಚಹಾ ಕುಡಿಯಲು ಕೆಲ ಸಚಿವರು ಬಂದಿದ್ದರು. ಅದೇ ಸಮಯದಲ್ಲಿ ಹೋಟೆಲ್ ನಲ್ಲಿದ್ದ ಬಿಬಿಎಂಪಿ ಅಧಿಕಾರಿಗಳೂ ನಮ್ಮ ಜೊತೆಗೂಡಿದರು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಯಾವುದೇ ಸಭೆಯ ಅಧ್ಯಕ್ಷತೆ ವಹಿಸುವ ಅಧಿಕಾರ ನನಗಿಲ್ಲ. ನಾನೇಕೆ ಇಂತಹ ಸಭೆ ನಡೆಸಬೇಕು' ಎಂದು ಪ್ರಶ್ನಿಸಿದರು.

ವಿಧಾನಸಭಾ ಚುನಾವಣೆಯ ಸೋಲಿನ ಹತಾಶೆಯಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

SCROLL FOR NEXT