ಸಚಿವ ಡಾ.ಎಂ.ಸಿ.ಸುಧಾಕರ್ 
ರಾಜ್ಯ

ವೃತ್ತಿಪರ ಕೋರ್ಸ್‍ಗಳ ಶುಲ್ಕದಲ್ಲಿ ಯಾವುದೇ ಬದಲಾವಣೆ ಇಲ್ಲ: ಸಚಿವ ಡಾ. ಎಂ.ಸಿ.ಸುಧಾಕರ್ ಸ್ಪಷ್ಟನೆ

ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಶಿಕ್ಷಣ ಶುಲ್ಕವನ್ನು ಹಿಂದಿನ ಸರಕಾರವೇ ಶೇ.10ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಿದ್ದು, ಈಗ ಯಾವುದೇ ಬದಲಾವಣೆಗೆ ಮುಂದಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಶಿಕ್ಷಣ ಶುಲ್ಕವನ್ನು ಹಿಂದಿನ ಸರಕಾರವೇ ಶೇ.10ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಿದ್ದು, ಈಗ ಯಾವುದೇ ಬದಲಾವಣೆಗೆ ಮುಂದಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ.

ನಗರದ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಹಿಂದಿನ ವರ್ಷಗಳಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗೆ ಸರಕಾರಿ ಕಾಲೇಜುಗಳಲ್ಲಿ 38,200ರೂ, ಅನುದಾನ ರಹಿತ ಕಾಲೇಜು, ಖಾಸಗಿ ಹಾಗೂ ಸ್ವಾಯತ್ತ ಕಾಲೇಜುಗಳಲ್ಲಿ 91,796ರೂ, ಎರಡನೆ ಶ್ರೇಣಿಯ ಅನುದಾನ ರಹಿತ ಕಾಲೇಜುಗಳಲ್ಲಿ 98,984ರೂ.ಶುಲ್ಕವಿತ್ತು. ಈ ವರ್ಷ ಅದರ ಜತೆಗೆ ಶೇ.10ರಷ್ಟು ಹೆಚ್ಚುವರಿಯಾಗಲಿದೆ ಎಂದು ಹೇಳಿದರು.

‘ಬಿ’ ಫಾರ್ಮಾ ಕೋರ್ಸ್‍ಗೆ ಸರಕಾರಿ ಕಾಲೇಜುಗಳಲ್ಲಿ 14,530ರೂ., ಅನುದಾನ ರಹಿತ ಕಾಲೇಜುಗಳಲ್ಲಿ 26,500ರೂ., ‘ಡಿ’ ಫಾರ್ಮಾ ಕೋರ್ಸ್‍ಗೆ ಅನುದಾನ ರಹಿತ ಕಾಲೇಜುಗಳಲ್ಲಿ 67,500 ರೂ., ಪಶು ವೈದ್ಯಕೀಯ ಕೋರ್ಸ್‍ಗೆ ಸರಕಾರಿ ಕಾಲೇಜಿನಲ್ಲಿ 53,170ರೂ., ಮೀನುಗಾರಿಗೆ ಮತ್ತು ಪಶುಸಂಗೋಪನೆ, ಬಿಎಫ್ ಕೋರ್ಸ್‍ಗೆ 29,170ರೂ. ಶುಲ್ಕವನ್ನು ಹಿಂದಿನ ವರ್ಷ ನಿಗದಿ ಮಾಡಲಾಗಿತ್ತು.

ಇನ್ನೂ, ಶುಲ್ಕ ಪರಿಷ್ಕರಣೆಗಾಗಿ ಹಿಂದಿನ ಸರಕಾರ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಕಾಲೇಜು ಆಡಳಿತ ಮಂಡಳಿಗಳ ಜತೆ ಸುದೀರ್ಘ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಂಡಿದೆ. ಬಳಿಕ ಶುಲ್ಕ ಹೆಚ್ಚಳಕ್ಕೆ ಈಗಾಗಲೇ ಆದೇಶವೂ ಜಾರಿಯಾಗಿದೆ. ಅದನ್ನು ಬದಲಾವಣೆ ಮಾಡುವುದಿಲ್ಲ.

ಮಾತುಕತೆ ಹಾಗೂ ಸಂಧಾನ ಪ್ರಕ್ರಿಯೆಗಳ ಮೂಲಕವೇ ಶುಲ್ಕ ನಿಗದಿಯಾಗಿರುವುದರಿಂದ ಮತ್ತೊಮ್ಮೆ ಶುಲ್ಕವನ್ನು ಹೆಚ್ಚಿಸುವುದಾಗಲಿ ಅಥವಾ ಕಡಿಮೆ ಮಾಡುವ ಅಗತ್ಯ ಇಲ್ಲ ಎಂದು ಖಚಿತಪಡಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕುರಿತು ಮಾತನಾಡಿ, ಶಾಲೆ ಮತ್ತು ಉನ್ನತ ಶಿಕ್ಷಣ ಎರಡನ್ನೂ ಒಳಗೊಂಡಿರುವ ಕಾರಣ ಈ ಕುರಿತು ವಿವರವಾದ ಚರ್ಚೆ ನಡೆಸಬೇಕಿದೆ. ಪಠ್ಯಕ್ರಮದ ಬದಲಾವಣೆಯ ಹೊರತಾಗಿ ಶಾಲೆಗಳಲ್ಲಿ ಎನ್ಇಪಿ ಜಾರಿಗೆ ಬಂದಿಲ್ಲ. ಈ ಕುರಿತು ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT