ಅಪಘಾತದಲ್ಲಿ ಸಾವನ್ನಪ್ಪಿದ ತಾಯಿ ಮತ್ತು ಮಗಳು 
ರಾಜ್ಯ

ತುಮಕೂರು: ಆ್ಯಕ್ಸೆಲ್​ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್; ಮದುವೆ ಮುಗಿಸಿ ವಾಪಸಾಗುತ್ತಿದ್ದ ತಾಯಿ-ಮಗಳು ಸಾವು

ಕ್ಯಾಂಟರ್​ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ದುರಂತ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ತುಮಕೂರು‌: ಕ್ಯಾಂಟರ್​ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ದುರಂತ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ ಆ್ಯಕ್ಸೆಲ್​ ಬ್ಲೇಡ್​ ಕಟ್ ಆಗಿ ಕ್ಯಾಂಟರ್​ರೊಂದು ಆಟೋಗೆ ಡಿಕ್ಕಿ ಹೊಡೆದಿದೆ.  ಈ ವೇಳೆ ಆಟೋದಲ್ಲಿದ್ದ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.

ಶಾಂತಲಕ್ಷ್ಮೀ(30), ಪುತ್ರಿ ಚಿನ್ಮಯಿ(5) ಮೃತ ರ್ದುದೈವಿಗಳು. ಮೃತಪಟ್ಟವರು ತುಮಕೂರಿನ ಕುಂಟಮ್ಮದ ತೋಟದವರು ಎಂದು ಗುರುತಿಸಲಾಗಿದೆ. ಇವರು ಭೀಮಸಂದ್ರದಿಂದ ಮದುವೆ ಮುಗಿಸಿ ತುಮಕೂರು ನಗರಕ್ಕೆ ಬರುತ್ತಿದ್ದರು.

ಈ ವೇಳೆ ಸಡನ್ ಬ್ರೇಕ್ ಹಾಕಿದ ಕಾರಣ ಕ್ಯಾಂಟರ್​ನ ಆ್ಯಕ್ಸಲ್ ಕಟ್ಟಾಗಿ ಹೌಸಿಂಗ್ ಆಟೋಗೆ ಅಪ್ಪಳಿಸಿದೆ.  ಮೃತ ಶಾಂತಲಕ್ಷ್ಮೀಯ ಪುತ್ರ ತನ್ಮಯ್ ಹಾಗೂ ಆಟೋ ಚಾಲಕ ಗಿರೀಶ್​ಗೆ ಗಂಭೀರ ಗಾಯವಾಗಿದೆ.

ಗಾಯಾಳು ತನ್ಮಯ್​ಗೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಟೋಚಾಲಕ ಗಿರೀಶ್​ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT