ಬೆಳಗಾವಿಯ ಸಿಟಿ ಬಸ್ ನಿಲ್ದಾಣದ ಎದುರು ಆಟೋ-ರಿಕ್ಷಾಗಳ ಮಾಲೀಕರು ಮತ್ತು ಚಾಲಕರು ಪ್ರತಿಭಟನೆ ನಡೆಸುತ್ತಿರುವುದು. 
ರಾಜ್ಯ

ಶಕ್ತಿ ಯೋಜನೆಗೆ ಆಟೋರಿಕ್ಷಾ ಚಾಲಕರ ವಿರೋಧ!

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಗೆ ಬೆಳಗಾವಿಯ ಆಟೋರಿಕ್ಷಾಗಳ ಮಾಲೀಕರು ಹಾಗೂ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಗೆ ಬೆಳಗಾವಿಯ ಆಟೋರಿಕ್ಷಾಗಳ ಮಾಲೀಕರು ಹಾಗೂ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಯೋಜನೆ ಆರಂಭಿಸಿದ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಆಟೋರಿಕ್ಷಾಗಳ ಮಾಲೀಕರು ಹಾಗೂ ಚಾಲಕರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಯೋಜನೆಯಿಂದಾಗಿ ನಮ್ಮ ವ್ಯವಹಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ನಮ್ಮ ಆದಾಯ ಕೂಡ ಶೇ.50ರಷ್ಟು ಇಳಿಕೆಯಾಗಿದೆ. ಇದರಿಂದ ಜೀವನ ನಡೆಸುವುದು ಅಸಾಧ್ಯವಾಗಿದೆ ಎಂದು ಆಟೋರಿಕ್ಷಾ ಚಾಲಕರು ಹೇಳಿದ್ದಾರೆ.

ಆಟೋರಿಕ್ಷಾ ಚಾಲಕರ ಪ್ರತಿಭಟನೆಯಿಂದಾಗಿ ನಗರದ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಧಾವಿಸಿ ಪೊಲೀಸರು, ಪ್ರತಿಭಟನಾಕಾರರ ಮನವೊಲಿಸಿ ಧರಣಿ ಹಿಂಪಡೆಯಲು ಯತ್ನಿಸಿದರು.

ಈ ವೇಳೆ ಯೋಜನೆ ಹಿಂಪಡೆಯದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT