ರಾಮಲಿಂಗಾ ರೆಡ್ಡಿ 
ರಾಜ್ಯ

ಚುನಾವಣೆಯಲ್ಲಿ ಗೆಲುವು: ತಮ್ಮ ಪರ ಶ್ರಮಿಸಿದ ಅಭಿಮಾನಿಗಳಿಗೆ ಔತಣಕೂಟ ಏರ್ಪಡಿಸಿದ ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಗೆಲುವಿಗಾಗಿ ಶ್ರಮಿಸಿದ ಅಭಿಮಾನಿಗಳು, ಕಾರ್ಯಕರ್ತರಿಗಾಗಿ ಸಚಿವ ರಾಮಲಿಂಗಾ ರೆಡ್ಡಿಯವರು ಔತಣಕೂಟವನ್ನು ಭಾನುವಾರ ಆಯೋಜಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಗೆಲುವಿಗಾಗಿ ಶ್ರಮಿಸಿದ ಅಭಿಮಾನಿಗಳು, ಕಾರ್ಯಕರ್ತರಿಗಾಗಿ ಸಚಿವ ರಾಮಲಿಂಗಾ ರೆಡ್ಡಿಯವರು ಔತಣಕೂಟವನ್ನು ಭಾನುವಾರ ಆಯೋಜಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬಿ.ಟಿ.ಎಂ ವಿಧಾನಸಭಾ ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡಿದ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿರವರ ಪರವಾಗಿ ಶ್ರಮಿಸಿದ ಎಲ್ಲರಿಗೂ ತುಂಬು ಹೃದಯದ ಕೃತಘ್ನತೆಗಳನ್ನು ಸಲ್ಲಿಸುತ್ತಿದ್ದೇನೆ. ಗೆಲುವಿಗೆ ಶ್ರಮಿಸಿದ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗಾಗಿ ಭಾನುವಾರ ಔತಣಕೂಡವನ್ನು ಏರ್ಪಡಿಸಲಾಗಿದೆ. ನಿಮ್ಮೆಲ್ಲರಿಗೂ  ಹೃತ್ಪೂರ್ವಕವಾಗಿ ಆಹ್ವಾನಿಸುತ್ತಿದ್ದೇನೆಂದು ಹೇಳಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರಲ್ಲಿ ರಾಮಲಿಂಗಾ ರೆಡ್ಡಿ ಕೂಡ ಒಬ್ಬರು, ರಾಮಲಿಂಗಾ ರೆಡ್ಡಿಯವರು ಈ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿಯವರು ಬಿಟಿಎಂ ಲೇಔಟ್​​ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದರು. ಚುನಾವಣಾ ಫಲಿತಾಂಶ ಮೇ.13ರಂದು ಪ್ರಕಟಗೊಂಡಿತ್ತು. ರಾಮಲಿಂಂಗಾ ರೆಡ್ಡಿಯವರು, ಬಿಜೆಪಿ ಅಭ್ಯರ್ಥಿ ಕೆ.ಆರ್.ಶ್ರೀಧರ್​ ವಿರುದ್ಧ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

ಹಾವೇರಿ: ಸುಂಟರಗಾಳಿಗೆ ಕುಸಿದ ಬೃಹತ್ ಪೆಂಡಾಲ್‌; ಸತೀಶ್ ಜಾರಕಿಹೊಳಿ ಸ್ವಲ್ಪದರಲ್ಲೇ ಪಾರು!

ʻರಿಪಬ್ಲಿಕ್ ಆಫ್ ಬಳ್ಳಾರಿʼಗೆ ಮತ್ತೆ ಅವಕಾಶ ನೀಡಲ್ಲ; ರೆಡ್ಡಿ ಕೋಟೆ ನಿರ್ಮಿಸಿಕೊಂಡಿದ್ದಾರೆ, ಅವರನ್ನು ಕೊಲ್ಲಲು ಸಾಧ್ಯವೇ?

ಕಾಂಗ್ರೆಸ್​​ನಿಂದ G RAM G ಕಾಯ್ದೆ ವಿರುದ್ಧ ದೇಶಾದ್ಯಂತ 'MGNREGA ಬಚಾವೋ ಸಂಗ್ರಾಮ್'

SCROLL FOR NEXT