ಸಂಗ್ರಹ ಚಿತ್ರ 
ರಾಜ್ಯ

ಶಕ್ತಿ ಯೋಜನೆ: ಮೇಲೆಯೇ ಬಸ್ ಹತ್ತಿಸಲು ಯತ್ನ, ಚಾಲಕನ ಅನಾಗರೀಕ ವರ್ತನೆಗೆ ಮಹಿಳೆಯರ ಹಿಡಿಶಾಪ!

ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ `ಶಕ್ತಿಯೋಜನೆ’ ಜಾರಿಯಾಗಿದ್ದು, ಮಹಿಳೆಯರು ರಾಜ್ಯದ್ಯಾಂತ ಉಚಿತ ಪ್ರಯಾಣ ನಡೆಸುತ್ತಿದ್ದಾರೆ. ಪ್ರತಿದಿನ ಲಕ್ಷಾಂತರ ಮಹಿಳೆಯರು ಅಗತ್ಯ ದಾಖಲೆಗಳನ್ನ ತೋರಿಸಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ.

ತುಮಕೂರು: ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ `ಶಕ್ತಿಯೋಜನೆ’ ಜಾರಿಯಾಗಿದ್ದು, ಮಹಿಳೆಯರು ರಾಜ್ಯದ್ಯಾಂತ ಉಚಿತ ಪ್ರಯಾಣ ನಡೆಸುತ್ತಿದ್ದಾರೆ. ಪ್ರತಿದಿನ ಲಕ್ಷಾಂತರ ಮಹಿಳೆಯರು ಅಗತ್ಯ ದಾಖಲೆಗಳನ್ನ ತೋರಿಸಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ. ಈ ನಡುವೆ ಟಿಕೆಟ್ ಕಲೆಕ್ಷನ್ ಆಗಿಲ್ಲ ಎಂದು ಬೇಸತ್ತ ಚಾಲಕನೊಬನ್ಬ ಮಹಿಳೆಯರ ಮೇಲೆಯೇ ಬಸ್ ಹತ್ತಿಸಲು ಮುಂದಾಗಿದ್ದ ಪ್ರಸಂಗವೊಂದು ತುಮಕೂರು ಜಿಲ್ಲೆಯ ಕೊರಟಗೆರೆಯ ನಾಗೇನಹಳ್ಳಿ ಗೇಟ್ ಬಳಿ ನಡೆದಿದೆ.

ಕೆಲ ಮಹಿಳೆಯರು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಿಂದ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಂದಿದ್ದರು. ಪುಟ ಪುಟ್ಟ ಕಂದಮ್ಮಗಳನ್ನ ಕಂಕುಳಲ್ಲಿ ಹೊತ್ತು ದೇವರ ದರ್ಶನ ಮುಗಿಸಿದ ಮಹಿಳೆಯರು ಸಂಜೆ ವೇಳೆಗೆ ಮನೆಗೆ ಹಿಂದಿರುಗಲು ಬಸ್ಸಿಗಾಗಿ ಕಾಯುತ್ತಿದ್ದರು.

ಸುಮಾರು 2 ಗಂಟೆ ಕಾದರೂ ಬಸ್ ಸಿಗದಿದ್ದ ಕಾರಣ, ಮಧುಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸನ್ನು ತಡೆಯಲು ಮುಂದಾಗಿದ್ದರು, ಇತ್ತ ಕಲೆಕ್ಷನ್ ಆಗಿಲ್ಲ ಎಂದು ಬೇಸತ್ತಿದ್ದ ಚಾಲಕ ಆರಂಭದಲ್ಲಿ ಬಸ್ ವೇಗವನ್ನು ಕಡಿಮೆ ಮಾಡಿದ್ದ. ಆದರೆ, ಇದ್ದಕ್ಕಿದ್ದಂತೆ ವೇಗ ಹೆಚ್ಚಿಸಿ ಮಹಿಳೆಯರ ಮೇಲೆ ಹತ್ತಿಸಿಬಿಡುವಂತೆ ಶಾಕ್ ಕೊಟ್ಟಿದ್ದ.  ಈ ವೇಳೆ ಭಯಭೀತರಾದ ಮಹಿಳೆಯರು ಚಾಲಕನಿಗೆ ಹಿಡಿಶಾಪ ಹಾಕಿದರು.

ಅಲ್ಲದೆ, ಚಾಲಕನ ವರ್ತನೆ ಬಗ್ಗೆ ಸ್ಥಳೀಯ ತಹಶಿಲ್ದಾರ್‌ಗೆ ಮಾಹಿತಿ ನೀಡಿದರು. ನಂತರ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಮಹಿಳೆಯರಿಗೆ ಬೇರೆ ಬಸ್ ಹತ್ತಿಸಿದ್ದಾರೆ, ಇದೇ ವೇಳೆ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

ಲಷ್ಕರ್ ಉಗ್ರ Bilal Arif Sarafi ಹತ್ಯೆಗೆ ಟ್ವಿಸ್ಟ್: , ಕೊಂದಿದ್ದು 'ಧುರಂಧರ್' ಅಲ್ಲ..! ಎಂದ ಪಾಕಿಸ್ತಾನ.. ಮತ್ತೆ ಯಾರು? Video

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

SCROLL FOR NEXT