ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ: ನಾಲ್ವರು ಪೊಲೀಸರಿಂದ ಥಳಿತ, ವ್ಯಕ್ತಿ ಆತ್ಮಹತ್ಯೆ!

ನಾಲ್ವರು ಪೊಲೀಸರು ಥಳಿಸಿದ್ದರಿಂದ ಮನನೊಂದ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವ್ಯಕ್ತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಾಲ್ವರು ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶಿವಮೊಗ್ಗ: ನಾಲ್ವರು ಪೊಲೀಸರು ಥಳಿಸಿದ್ದರಿಂದ ಮನನೊಂದ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವ್ಯಕ್ತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಾಲ್ವರು ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಿನಗೂಲಿ ಕಾರ್ಮಿಕ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡ ದಿನಗೂಲಿ ಕಾರ್ಮಿಕ,  ಮೃತರ ಪತ್ನಿ ನೀಡಿದ ದೂರಿನ ಪ್ರಕಾರ, ಜೂನ್ 11 ರಂದು ಹೊಳೆಹೊನ್ನೂರು ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ ಬಿಲ್ಲಾಲ್ ಮತ್ತು ಲಿಂಗೇಗೌಡ ಹಾಗೂ ಇನ್ನಿಬ್ಬರಾದ ಸುದರ್ಶನ್ ಮತ್ತು ವಿಶ್ವನಾಥ್ ಹೊಳೆಹೊನ್ನೂರಿನ ಪಟ್ಟಣ ಪಂಚಾಯಿತಿ ಬಳಿ ಮಂಜುನಾಥನಿಗೆ ಥಳಿಸಿದ್ದಾರೆ. ಬಳಿಕ ಠಾಣೆಗೆ ಕರೆದೊಯ್ದು ಸಂಬಂಧಿಕರು ಠಾಣೆಗೆ ತೆರಳಿದ ಬಳಿಕ ಹೊರಗೆ ಕಳುಹಿಸಿದ್ದಾರೆ.

ಘಟನೆಯ ನಂತರ ಮಂಜುನಾಥ್ ಮನನೊಂದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಪತ್ನಿ ಗರ್ಭಿಣಿಯಾಗಿರುವ ಕಾರಣ ಮಂಜುನಾಥ್ ಜೂನ್ 15ರಂದು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚುಚ್ಚುಮದ್ದು ಹಾಕಿಸಿ ಮನೆಗೆ ಮರಳಿದ್ದರು. ಅದೇ ದಿನ ರಾತ್ರಿ ಮಂಜುನಾಥ್ ಕ್ರಿಕೆಟ್ ನೋಡಬೇಕು ಎಂದು ಪಕ್ಕದ ಕೋಣೆಯಲ್ಲಿ ಮಲಗುವುದಾಗಿ ಪತ್ನಿಗೆ ಹೇಳಿದ್ದ. ಮರುದಿನ ಬೆಳಗ್ಗೆ ಕೊಠಡಿ ತೆರೆಯದಿದ್ದಾಗ ಪತ್ನಿ ಸಂಬಂಧಿಕರಿಗೆ ಕರೆ ಮಾಡಿದ್ದಾರೆ. ಕೊಠಡಿಯ ಕಿಟಕಿ ಒಡೆದು ನೋಡಿದಾಗ ಮಂಜುನಾಥ್ ಶವವಾಗಿ ಪತ್ತೆಯಾಗಿದ್ದಾರೆ. ನಾಲ್ವರು ಸಿಬ್ಬಂದಿ ವಿರುದ್ಧ ಅವರ ಪತ್ನಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT