ಕೊಲೆ ಆರೋಪಿಗೆ ಗುಂಡೇಟು 
ರಾಜ್ಯ

ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮರಳು ಮಾಫಿಯಾ ಆರೋಪಿ ಕಾಲಿಗೆ ಗುಂಡೇಟು!

ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ. 

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ. 

ಆರೋಪಿ ನೆಲೋಗಿ ಪೊಲೀಸ್ ಠಾಣೆಯ ಪಿಎಸ್ ಐ ಮೇಲೆ ಹಲ್ಲೆ ಮಾಡಿ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ.  ಈತ ಪೊಲೀಸ್ ಪೇದೆ ಮಯೂರ ಚೌಹಾಣ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ. 

ಜೇವರ್ಗಿ ಪೊಲೀಸ್ ಠಾಣೆಯ ಮತ್ತೊಬ್ಬ ಪಿಎಸ್ಐ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಸೈಬಣ್ಣ ಕರಜಗಿಗೆ ಗುಂಡೇಟು ಹೊಡೆದಿದ್ದು, ಮರಳಿ ವಾಪಸ್ ವಶಕ್ಕೆ ಪಡೆದಿದ್ದಾರೆ.
 
ಜೇವರ್ಗಿ ತಾಲೂಕಿನ ಮಂಡೇವಾಲದಲ್ಲಿ ಈ ಘಟನೆ ನಡೆದಿದೆ. ಮಯೂರ್ ಚೌಹಾಣ್ ಹತ್ಯೆ ಪ್ರಕರಣದ ಆರೋಪಿ  ವಿಜಯಪುರ ಜಿಲ್ಲೆಯ ಅಲಮೇಲ್ ಗ್ರಾಮದಲ್ಲಿ ಆಶ್ರಯ ಪಡೆದಿದ್ದ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆತನನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಅಲ್ಮೇಲ್ ನಿಂದ ಆರೋಪಿಯನ್ನು ಜೇವರ್ಗಿಗೆ ಕರೆತರಲಾಗುತ್ತಿತ್ತು. ಮಾರ್ಗಮಧ್ಯದಲ್ಲಿ ಮುಖ್ಯ ಆರೋಪಿ, ನೆಲೋಗಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಹಾಗೂ ಇತರ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರು ಯತ್ನಿಸಿದರಾದರೂ ಆತ ದಾಳಿ ಮುಂದುವರೆಸಿದ ಕಾರಣ ಕಾಲಿಗೆ ಗುಂಡುಹೊಡೆದು ವಶಕ್ಕೆ ಪಡೆಯಲಾಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT