ಸಾಂದರ್ಭಿಕ ಚಿತ್ರ 
ರಾಜ್ಯ

ವಿದ್ಯುತ್ ದರ ಹೆಚ್ಚಳವನ್ನು ಮುಂದೂಡುವಂತೆ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರಿನ ಹೋಟೆಲ್ ಮಾಲೀಕರು

ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಪತ್ರ ಬರೆದಿದ್ದು, ವಿದ್ಯುತ್ ದರದಲ್ಲಿ ಮಾಡಿರುವ ಏರಿಕೆಯನ್ನು ಕನಿಷ್ಠ ಒಂದು ವರ್ಷಕ್ಕೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು: ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಪತ್ರ ಬರೆದಿದ್ದು, ವಿದ್ಯುತ್ ದರದಲ್ಲಿ ಮಾಡಿರುವ ಏರಿಕೆಯನ್ನು ಕನಿಷ್ಠ ಒಂದು ವರ್ಷಕ್ಕೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ಆಯೋಗವು ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ದರ ಏರಿಸಲು ಒಪ್ಪಿಗೆ ಸೂಚಿಸಿದೆ. ಕೈಗಾರಿಕಾ ಬಳಕೆಯ ವಿದ್ಯುತ್ ಶುಲ್ಕವನ್ನು 125 ರೂ.ನಿಂದ 250 ರೂ.ಗೆ ಏರಿಕೆ ಮಾಡಲಾಗಿದೆ.

'ಇಂಧನ ಹೊಂದಾಣಿಕೆ ಶುಲ್ಕಗಳ ಹೆಚ್ಚಳ ಮತ್ತು ಸುಂಕದ ಏರಿಕೆಯೊಂದಿಗೆ ಸ್ಥಿರ ಬೇಡಿಕೆ ಶುಲ್ಕಗಳು ನಮ್ಮ ಆರ್ಥಿಕ ಹೊರೆಗಳನ್ನು ಹೆಚ್ಚಿಸಿವೆ' ಎಂದು ಬ್ರುಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ (ಬಿಬಿಎಚ್ಎ) ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.

ದರ ಏರಿಕೆ ಬದಲಿಗೆ ಸರ್ಕಾರವು ವಿದ್ಯುತ್‌ ಸರಬರಾಜು ಮತ್ತು ವಿತರಣೆ ಸಮಯದಲ್ಲಿ ಆಗುವ ನಷ್ಟವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು ಮತ್ತು ಆಡಳಿತ ವೆಚ್ಚವನ್ನು ಸರಳೀಕರಿಸುವತ್ತ ಗಮನ ಹರಿಸಬೇಕು ಎಂದು ಹೋಟೆಲ್ ಮಾಲೀಕರು ಸಲಹೆ ನೀಡಿದರು. ಇದಲ್ಲದೆ, ತೆರಿಗೆಯನ್ನು ಶೇ 9 ರಿಂದ ಶೇ 3ಕ್ಕೆ ಇಳಿಸುವಂತೆ ಕೋರಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿ ಸಹಿತ ವಸೂಲಿ ಮಾಡಬೇಕು. ಪ್ರಿಪೈಡ್ ಮೀಟರ್ ಅಳವಡಿಕೆ ಮಾಡಿ ಗ್ರಾಹಕರ ಠೇವಣಿ ಹಣವನ್ನು ಹಿಂತಿರುಗಿಸಬೇಕು ಎಂದು ಮನವಿ ಮಾಡಿದೆ.

ನಮ್ಮ ಉದ್ಯಮವು ವಿದ್ಯುತ್ ದರದ ಏರಿಕೆಯ ಭಾರವನ್ನು ಹೊರುತ್ತಿದೆ ಮತ್ತು ಉದ್ಯಮದ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ ಎಂದು ರಾವ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ, ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

'ನಾನಿನ್ನೂ IPL ಮುಖ್ಯಸ್ಥನಾಗಿದ್ರೆ ತಕ್ಷಣವೇ ಸಂಜೀವ್ ಗೋಯೆಂಕಾ ಬ್ಯಾನ್' ಮಾಡ್ತಿದೆ- ಲಲಿತ್ ಮೋದಿ

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

ಹೊಸ ಇಂಡಕ್ಷನ್ ಸ್ಟೌವ್ ಖರೀದಿಸುತ್ತಿದ್ದೀರಾ? ಬೆಸ್ಕಾಂನ ಈ ಮಾರ್ಗಸೂಚಿ ಗಮನಿಸಿ!

SCROLL FOR NEXT