ಸಾಂದರ್ಭಿಕ ಚಿತ್ರ 
ರಾಜ್ಯ

ವಿದ್ಯುತ್ ದರ ಹೆಚ್ಚಳವನ್ನು ಮುಂದೂಡುವಂತೆ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರಿನ ಹೋಟೆಲ್ ಮಾಲೀಕರು

ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಪತ್ರ ಬರೆದಿದ್ದು, ವಿದ್ಯುತ್ ದರದಲ್ಲಿ ಮಾಡಿರುವ ಏರಿಕೆಯನ್ನು ಕನಿಷ್ಠ ಒಂದು ವರ್ಷಕ್ಕೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು: ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಪತ್ರ ಬರೆದಿದ್ದು, ವಿದ್ಯುತ್ ದರದಲ್ಲಿ ಮಾಡಿರುವ ಏರಿಕೆಯನ್ನು ಕನಿಷ್ಠ ಒಂದು ವರ್ಷಕ್ಕೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ಆಯೋಗವು ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ದರ ಏರಿಸಲು ಒಪ್ಪಿಗೆ ಸೂಚಿಸಿದೆ. ಕೈಗಾರಿಕಾ ಬಳಕೆಯ ವಿದ್ಯುತ್ ಶುಲ್ಕವನ್ನು 125 ರೂ.ನಿಂದ 250 ರೂ.ಗೆ ಏರಿಕೆ ಮಾಡಲಾಗಿದೆ.

'ಇಂಧನ ಹೊಂದಾಣಿಕೆ ಶುಲ್ಕಗಳ ಹೆಚ್ಚಳ ಮತ್ತು ಸುಂಕದ ಏರಿಕೆಯೊಂದಿಗೆ ಸ್ಥಿರ ಬೇಡಿಕೆ ಶುಲ್ಕಗಳು ನಮ್ಮ ಆರ್ಥಿಕ ಹೊರೆಗಳನ್ನು ಹೆಚ್ಚಿಸಿವೆ' ಎಂದು ಬ್ರುಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ (ಬಿಬಿಎಚ್ಎ) ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.

ದರ ಏರಿಕೆ ಬದಲಿಗೆ ಸರ್ಕಾರವು ವಿದ್ಯುತ್‌ ಸರಬರಾಜು ಮತ್ತು ವಿತರಣೆ ಸಮಯದಲ್ಲಿ ಆಗುವ ನಷ್ಟವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು ಮತ್ತು ಆಡಳಿತ ವೆಚ್ಚವನ್ನು ಸರಳೀಕರಿಸುವತ್ತ ಗಮನ ಹರಿಸಬೇಕು ಎಂದು ಹೋಟೆಲ್ ಮಾಲೀಕರು ಸಲಹೆ ನೀಡಿದರು. ಇದಲ್ಲದೆ, ತೆರಿಗೆಯನ್ನು ಶೇ 9 ರಿಂದ ಶೇ 3ಕ್ಕೆ ಇಳಿಸುವಂತೆ ಕೋರಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿ ಸಹಿತ ವಸೂಲಿ ಮಾಡಬೇಕು. ಪ್ರಿಪೈಡ್ ಮೀಟರ್ ಅಳವಡಿಕೆ ಮಾಡಿ ಗ್ರಾಹಕರ ಠೇವಣಿ ಹಣವನ್ನು ಹಿಂತಿರುಗಿಸಬೇಕು ಎಂದು ಮನವಿ ಮಾಡಿದೆ.

ನಮ್ಮ ಉದ್ಯಮವು ವಿದ್ಯುತ್ ದರದ ಏರಿಕೆಯ ಭಾರವನ್ನು ಹೊರುತ್ತಿದೆ ಮತ್ತು ಉದ್ಯಮದ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ ಎಂದು ರಾವ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌ಡಿ ಕುಮಾರಸ್ವಾಮಿ

ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

TNIE ವರದಿ ಫಲಶೃತಿ: ಸ್ವಚ್ಛತೆ ಪರಿಶೀಲಿಸಲು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಪಿಗೆ ಭೇಟಿ

SCROLL FOR NEXT