ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತ: 10 ಮಂದಿ ಪ್ರಯಾಣಿಕರಿಗೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ವೊಂದು ಅಪಘಾತಕ್ಕೀಡಾಗಿ, 10 ಮಂದಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ವೊಂದು ಅಪಘಾತಕ್ಕೀಡಾಗಿ, 10 ಮಂದಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.

ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ನಡುವೆ ಕಾರ್ಯನಿರ್ವಹಿಸುತ್ತಿದ್ದ ಶಟಲ್ ಬಸ್ ಇಂದು ಬೆಳಿಗ್ಗೆ 5.15ರ ಸುಮಾರಿಗೆ ಟರ್ಮಿನಲ್ 2 ಆಗಮನ ನಿರ್ಗಮನ ರಸ್ತೆಯ ಬಳಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆ ವೇಳೆ ಬಸ್ಸಿನಲ್ಲಿ ಒಟ್ಟು 17 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.

ಗಾಯಾಳುಗಳಿಗೆ ವಿಮಾನ ನಿಲ್ದಾಣದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT