ರಾಜ್ಯ

ರಾಮನಗರ: ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ; ಅಕ್ಕನ ಸಾವು, ತಂಗಿಯ ಸ್ಥಿತಿ ಗಂಭೀರ

Vishwanath S

ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾ ನಗರದಲ್ಲಿ ಜಮೀನಿನಲ್ಲಿ ಕೆಲಸ ಮಾಡಲು ಹೋಗುತ್ತಿದ್ದ ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. 

ಕಾಡಾನೆ ದಾಳಿಯಲ್ಲಿ 50 ವರ್ಷದ ಜಯಮ್ಮ ಎಂಬುವರು ಮೃತಪಟ್ಟಿದ್ದರೆ ಅವರ ತಂಗಿ 45 ವರ್ಷದ ವೆಂಕಲಕ್ಷ್ಮಮ್ಮನ ಪರಿಸ್ಥಿತಿ ಗಂಭೀರವಾಗಿದೆ. 

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಕನಕಪುರ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ ಆನೆ ತುಳಿತಕ್ಕೆ ಇಬ್ಬರು ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೆ ಕಾಡಾನೆ ದಾಳಿ ಮಾಡಿದೆ.

SCROLL FOR NEXT