ಪರಿಹಾರ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ಪರಿಹಾರ: ತಲಾ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು.

ಬೆಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು. 

ಮಂಗಳೂರಿನಲ್ಲಿ 2018ರ ಜನವರಿ 3ರಂದು ಹತ್ಯೆಯಾಗಿದ್ದ ಕಾಟಿಪಳ್ಳದ ದೀಪಕ್ ರಾವ್ ಮತ್ತು ಬೆಳ್ಳಾರೆಯ ಮಸೂದ್,ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ , 2022 ಜನವರಿ 17 ರಂದು ಗದಗ ಜಿಲ್ಲೆ ನರಗುಂದದಲ್ಲಿ ಹತ್ಯೆಯಾಗಿದ್ದ ಸಮೀರ್,  2023 ಮಾರ್ಚ್ 31 ರಂದು ಮಂಡ್ಯದಲ್ಲಿ ಹತ್ಯೆಯಾಗಿದ್ದ ಇದ್ರಿಸ್ ಪಾಶ ಅವರ ಕುಟುಂಬ ಸದಸ್ಯರಿಗೂ ಪರಿಹಾರ ಚೆಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದರು. 

ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ  ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು. 

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿರುವುದಾಗಿ ತಿಳಿಸಿದರು. ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್,  ಮತ್ತಿತರ ನಾಯಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT