ಅಕ್ರಮ ಮರಳು ಗಣಿಗಾರಿಕೆ 
ರಾಜ್ಯ

ರಾತ್ರಿ ವೇಳೆ ತುಂಗಭದ್ರಾ ನದಿ ಪಾತ್ರದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಮರಳು ದಂಧೆ; ಸ್ಥಳೀಯರ ದೂರು

ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಪಾತಾಳ ತಲುಪಿದ್ದು, ಮುಂಡರಗಿ ತಾಲೂಕಿನಲ್ಲಿ ಅಕ್ರಮ ಮರಳು ದಂಧೆಕೋರರು ಹಗಲಿರುಳು ಮರಳು ದಂಧೆಯಲ್ಲಿ ತೊಡಗಿದ್ದಾರೆ.

ಗದಗ: ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಪಾತಾಳ ತಲುಪಿದ್ದು, ಮುಂಡರಗಿ ತಾಲೂಕಿನಲ್ಲಿ ಅಕ್ರಮ ಮರಳು ದಂಧೆಕೋರರು ಹಗಲಿರುಳು ಮರಳು ದಂಧೆಯಲ್ಲಿ ತೊಡಗಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ವಿಧಾನಸಭಾ ಚುನಾವಣೆಯ ನಂತರ ನಿರ್ಬಂಧಗಳನ್ನು ತೆರವು ಮಾಡಿದ ನಂತರ, ಗಣಿಗಾರರು ರಾತ್ರಿಯ ಸಮಯದಲ್ಲಿ ನದಿ ಪಾತ್ರದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಮರಳನ್ನು ಅಕ್ರಮವಾಗಿ ತೆಗೆಯುತ್ತಿದ್ದಾರೆ.

ನದಿಯಿಂದ ಮರಳು ಸಾಗಿಸುತ್ತಿರುವ ಲಾರಿಗಳ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿದರೂ, ಪ್ರಯೋಜನವಾಗಿಲ್ಲ. ಗದಗ ಜಿಲ್ಲಾಡಳಿತ, ಕಂದಾಯ ಇಲಾಖೆ ಹಾಗೂ ಪೊಲೀಸರು ಅಕ್ರಮ ಮರಳು ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ನಿಗಾ ವಹಿಸಿದ್ದರೂ, ರಾತ್ರಿ ವೇಳೆ ನದಿಪಾತ್ರದಲ್ಲಿ ಚಟುವಟಿಕೆ ಅವ್ಯಾಹತವಾಗಿ ಮುಂದುವರಿದಿದೆ.

ನೈಋತ್ಯ ಮಾನ್ಸೂನ್ ಅವಧಿಯಲ್ಲಿ ಮರಳುಗಾರಿಕೆಗೆ ನಿಷೇಧ ಹೇರುವುದಾಗಿ ಜಿಲ್ಲಾಡಳಿತ ಜೂನ್ 5ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿತ್ತು. ಆದರೂ, ಅಕ್ರಮ ಮರಳು ದಂಧೆ ಅವ್ಯಾಹತವಾಗಿ ಮುಂದುವರಿದಿದೆ. ಅಕ್ರಮ ಮರಳು ಗಣಿಗಾರಿಕೆ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಕೆ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಕ್ಕೂರಿನ ಮಲ್ಲೇಶಪ್ಪ ಪಾಟೀಲ ಮಾತನಾಡಿ, ಮಧ್ಯಾಹ್ನ 2-3 ಗಂಟೆ ಸುಮಾರಿಗೆ ನದಿ ಪಾತ್ರದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರು ಬರುತ್ತಿದ್ದು, ಲಾರಿಗಳ ಸದ್ದಿನಿಂದ ನಿದ್ದೆ ಬರುತ್ತಿಲ್ಲ ಎಂದು ಅಧಿಕಾರಿಗಳಿಗೆ ದೂರು ನೀಡುತ್ತಿದ್ದೇವೆ. ಅಧಿಕಾರಿಗಳು ಹಗಲಿನಲ್ಲಿ ನಿಗಾ ವಹಿಸುವುದರಿಂದ ರಾತ್ರಿ ವೇಳೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ನೀರಿನ ಮಟ್ಟ ಕಡಿಮೆಯಾದ ಕಾರಣ ಅವರು ನದಿಯ ಮುಖ್ಯ ಪ್ರದೇಶಗಳನ್ನು ಅಗೆಯುತ್ತಿದ್ದಾರೆ ಎಂದು ದೂರಿದರು. 

ಗದಗ ಡಿಸಿ ವೈಶಾಲ್ ಎಂಎಲ್ ಮಾತನಾಡಿ, ರಾತ್ರಿ ಅಕ್ರಮ ಗಣಿಗಾರಿಕೆ ಕುರಿತು ನಮಗೆ ದೂರುಗಳು ಬಂದಿದ್ದು, ಶೀಘ್ರವೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT