ಅಕ್ರಮ ಮರಳು ಗಣಿಗಾರಿಕೆ 
ರಾಜ್ಯ

ರಾತ್ರಿ ವೇಳೆ ತುಂಗಭದ್ರಾ ನದಿ ಪಾತ್ರದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಮರಳು ದಂಧೆ; ಸ್ಥಳೀಯರ ದೂರು

ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಪಾತಾಳ ತಲುಪಿದ್ದು, ಮುಂಡರಗಿ ತಾಲೂಕಿನಲ್ಲಿ ಅಕ್ರಮ ಮರಳು ದಂಧೆಕೋರರು ಹಗಲಿರುಳು ಮರಳು ದಂಧೆಯಲ್ಲಿ ತೊಡಗಿದ್ದಾರೆ.

ಗದಗ: ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಪಾತಾಳ ತಲುಪಿದ್ದು, ಮುಂಡರಗಿ ತಾಲೂಕಿನಲ್ಲಿ ಅಕ್ರಮ ಮರಳು ದಂಧೆಕೋರರು ಹಗಲಿರುಳು ಮರಳು ದಂಧೆಯಲ್ಲಿ ತೊಡಗಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ವಿಧಾನಸಭಾ ಚುನಾವಣೆಯ ನಂತರ ನಿರ್ಬಂಧಗಳನ್ನು ತೆರವು ಮಾಡಿದ ನಂತರ, ಗಣಿಗಾರರು ರಾತ್ರಿಯ ಸಮಯದಲ್ಲಿ ನದಿ ಪಾತ್ರದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಮರಳನ್ನು ಅಕ್ರಮವಾಗಿ ತೆಗೆಯುತ್ತಿದ್ದಾರೆ.

ನದಿಯಿಂದ ಮರಳು ಸಾಗಿಸುತ್ತಿರುವ ಲಾರಿಗಳ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿದರೂ, ಪ್ರಯೋಜನವಾಗಿಲ್ಲ. ಗದಗ ಜಿಲ್ಲಾಡಳಿತ, ಕಂದಾಯ ಇಲಾಖೆ ಹಾಗೂ ಪೊಲೀಸರು ಅಕ್ರಮ ಮರಳು ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ನಿಗಾ ವಹಿಸಿದ್ದರೂ, ರಾತ್ರಿ ವೇಳೆ ನದಿಪಾತ್ರದಲ್ಲಿ ಚಟುವಟಿಕೆ ಅವ್ಯಾಹತವಾಗಿ ಮುಂದುವರಿದಿದೆ.

ನೈಋತ್ಯ ಮಾನ್ಸೂನ್ ಅವಧಿಯಲ್ಲಿ ಮರಳುಗಾರಿಕೆಗೆ ನಿಷೇಧ ಹೇರುವುದಾಗಿ ಜಿಲ್ಲಾಡಳಿತ ಜೂನ್ 5ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿತ್ತು. ಆದರೂ, ಅಕ್ರಮ ಮರಳು ದಂಧೆ ಅವ್ಯಾಹತವಾಗಿ ಮುಂದುವರಿದಿದೆ. ಅಕ್ರಮ ಮರಳು ಗಣಿಗಾರಿಕೆ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಕೆ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಕ್ಕೂರಿನ ಮಲ್ಲೇಶಪ್ಪ ಪಾಟೀಲ ಮಾತನಾಡಿ, ಮಧ್ಯಾಹ್ನ 2-3 ಗಂಟೆ ಸುಮಾರಿಗೆ ನದಿ ಪಾತ್ರದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರು ಬರುತ್ತಿದ್ದು, ಲಾರಿಗಳ ಸದ್ದಿನಿಂದ ನಿದ್ದೆ ಬರುತ್ತಿಲ್ಲ ಎಂದು ಅಧಿಕಾರಿಗಳಿಗೆ ದೂರು ನೀಡುತ್ತಿದ್ದೇವೆ. ಅಧಿಕಾರಿಗಳು ಹಗಲಿನಲ್ಲಿ ನಿಗಾ ವಹಿಸುವುದರಿಂದ ರಾತ್ರಿ ವೇಳೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ನೀರಿನ ಮಟ್ಟ ಕಡಿಮೆಯಾದ ಕಾರಣ ಅವರು ನದಿಯ ಮುಖ್ಯ ಪ್ರದೇಶಗಳನ್ನು ಅಗೆಯುತ್ತಿದ್ದಾರೆ ಎಂದು ದೂರಿದರು. 

ಗದಗ ಡಿಸಿ ವೈಶಾಲ್ ಎಂಎಲ್ ಮಾತನಾಡಿ, ರಾತ್ರಿ ಅಕ್ರಮ ಗಣಿಗಾರಿಕೆ ಕುರಿತು ನಮಗೆ ದೂರುಗಳು ಬಂದಿದ್ದು, ಶೀಘ್ರವೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!