ತುಂಗಭದ್ರ ಜಲಾಶಯ 
ರಾಜ್ಯ

ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಉಳಿಸಲು ರಾಯಚೂರಿನಲ್ಲಿ ಸೆಕ್ಷನ್ 144 ಜಾರಿ

ಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ ಹೆಚ್ಚಾದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾಡಳಿತ ಜೂನ್ 17ರಿಂದ 27ರವರೆಗೆ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಕಾಲುವೆ ಮೂಲಕ ನಗರಕ್ಕೆ ನೀರು ಹರಿಸುತ್ತಿದೆ.

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ ಹೆಚ್ಚಾದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾಡಳಿತ ಜೂನ್ 17ರಿಂದ 27ರವರೆಗೆ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಕಾಲುವೆ ಮೂಲಕ ನಗರಕ್ಕೆ ನೀರು ಹರಿಸುತ್ತಿದೆ.

ತುಂಗಭದ್ರಾ ಅಣೆಕಟ್ಟಿನಿಂದ ತುಂಗಭದ್ರಾ ಎಡದಂಡೆ ಕಾಲುವೆಗೆ (ಟಿಎಲ್‌ಬಿಸಿ) ನೀರು ಬಿಡುವ ಮುನ್ನವೇ ನಾಲೆಯಿಂದ ನೀರು ಹರಿಸುವುದನ್ನು ತಡೆಯಲು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪ್ರಸ್ತುತ ಕೃಷ್ಣಾ ನದಿಯಿಂದ ರಾಯಚೂರು ನಗರಕ್ಕೆ ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ.

ಬಿಕ್ಕಟ್ಟು ನಿವಾರಿಸಲು ತುಂಗಭದ್ರಾ ಜಲಾಶಯದಿಂದ ಕಾಲುವೆ ಮೂಲಕ ನೀರು ಹರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಅಣೆಕಟ್ಟಿಯಿಂದ ಬಿಡುಗಡೆಯಾಗುವ ನೀರು ಟಿಎಲ್‌ಬಿಸಿ ಮೂಲಕ ಸುಮಾರು 130 ಮೈಲುಗಳವರೆಗೆ ಹರಿಯುತ್ತದೆ. ಮೊದಲು ಬಂಗಾರಪ್ಪ ಕೆರೆಯಲ್ಲಿರುವ ಬ್ಯಾಲೆನ್ಸಿಂಗ್ ಜಲಾಶಯದಲ್ಲಿ ನೀರು ಸಂಗ್ರಹಗೊಂಡು ನಂತರ ರಾಂಪುರ ಕೆರೆ ಜಲಾಶಯಕ್ಕೆ ಹರಿಸಲಾಗುವುದು. ನಂತರ ರಾಯಚೂರು ನಗರಕ್ಕೆ ಕುಡಿಯುವ ಉದ್ದೇಶಕ್ಕೆ ನೀರು ಬಿಡಲಾಗುವುದು.

ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ ನಾಯ್ಕ ಮಾತನಾಡಿ, ಗಸ್ತು ತಿರುಗಲು ಎಂಜಿನಿಯರ್‌ಗಳನ್ನು ನಿಯೋಜಿಸಿದ್ದರೂ, ಜನರು ಗೇಜ್‌ಗಳನ್ನು ಬಳಸಿ ನೀರು ತಿರುಗಿಸುವ ಸಾಧ್ಯತೆಗಳಿವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT