ಸಂಗ್ರಹ ಚಿತ್ರ 
ರಾಜ್ಯ

ಮೈಸೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಯುವಕರ ದುರ್ಮರಣ

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆ.ಆರ್. ಪೇಟೆ ತಾಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು-ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಮೈಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆ.ಆರ್. ಪೇಟೆ ತಾಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು-ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಹಿರೀಕಳಲೆ ಗ್ರಾಮದ ಸಂದೇಶ್(25) ಹಾಗೂ ಮರಡಹಳ್ಳಿ ನಿವಾಸಿ ಭರತ್(23) ಎಂದು ಗುರುತಿಸಲಾಗಿದೆ.

ಎಳನೀರು ವ್ಯಾಪಾರ ಮಾಡುತ್ತಿದ್ದ ಈ ಇಬ್ಬರು ಯುವಕರು ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಕೆ.ಆರ್.ಪೇಟೆಯಿಂದ ಕಿಕ್ಕೇರಿ ಕಡೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ಆ ವಾಹನದ ಪತ್ತೆಗಾಗಿ ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT