ಸಿದ್ದರಾಮಯ್ಯ-ಅಮಿತ್ ಶಾ 
ರಾಜ್ಯ

ಅಕ್ಕಿ ಪೂರೈಕೆ ವಿಚಾರವಾಗಿ ನಾಳೆ ಸಿಎಂ ಸಿದ್ದರಾಮಯ್ಯರಿಂದ ಅಮಿತ್ ಶಾ, ಪಿಯೂಷ್ ಗೋಯಲ್ ಭೇಟಿ

ದೆಹಲಿಯಲ್ಲಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ದೆಹಲಿಯಲ್ಲಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಭೇಟಿಯು ಸೌಜನ್ಯದ ಭೇಟಿಯಾಗಿದೆ. ನಾನು ಸಿಎಂ ಆದ ನಂತರ ಮೊದಲ ಬಾರಿಗೆ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದರು.

ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ರಾಜ್ಯಕ್ಕೆ ಅಕ್ಕಿ ಪೂರೈಕೆ ಕುರಿತು ಚರ್ಚೆ ನಡೆಸುತ್ತಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಅನ್ನ ಭಾಗ್ಯ ಯೋಜನೆ ಜಾರಿ ಕುರಿತು ಮಾತನಾಡಿದ ಸಿದ್ದರಾಮಯ್ಯ, ಯೋಜನೆ ಜಾರಿ ವಿಳಂಬವಾಗಬಹುದು ಎಂದರು. ಅನ್ನ ಭಾಗ್ಯ ಯೋಜನೆ ಜುಲೈ 1ರಿಂದ ಆರಂಭಿಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ಒಂದು ವೇಳೆ ಯೋಜನೆ ಜಾರಿಯಾಗದಿದ್ದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ.

“ಅಕ್ಕಿ ಖರೀದಿ ಸಂಬಂಧ ರಾಜ್ಯ ಸರ್ಕಾರ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್‌ಗಢ ಮತ್ತು ಪಂಜಾಬ್‌ನೊಂದಿಗೆ ಮಾತನಾಡಿದೆ. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ. ಆದರೆ ಪಶ್ಚಿಮ ಬಂಗಾಳ ಮತ್ತು ಪಂಜಾಬ್ ದೂರದಲ್ಲಿದೆ. ನಾವು ಸಾರಿಗೆ ವೆಚ್ಚವನ್ನು ಪರಿಗಣಿಸಬೇಕಾಗಿದೆ. ಲಭ್ಯವಿರುವ ಆಯ್ಕೆಯು ಛತ್ತೀಸ್‌ಗಢವಾಗಿದೆ. ಇಲ್ಲಿಯೂ ಸಾರಿಗೆ ವೆಚ್ಚ ಹೆಚ್ಚಾಗುತ್ತಿದೆ’’ ಎಂದು ಸಿದ್ದರಾಮಯ್ಯ ವಿವರಿಸಿದರು.

"ಈ ಮಧ್ಯೆ, ನಾವು ಕೇಂದ್ರ ಸರ್ಕಾರದ ಎಲ್ಲಾ ಮೂರು ಏಜೆನ್ಸಿಗಳಾದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ(ಎನ್‌ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ(ಎನ್‌ಎಎಫ್‌ಇಡಿ) ಮತ್ತು ಕೇಂದ್ರ ಭಂಡಾರ್‌ಗಳಿಂದ ಕೊಟೇಶನ್‌ಗಳನ್ನು ಪಡೆಯುತ್ತಿದ್ದೇವೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ಊರಸವಳ್ಳಿಯಂತೆ ಬದಲಾಗ್ತಾರೇ: ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಲೇ ಭಾಷಣ: ನೆಟ್ಟಿಗರು ಗರಂ, Video!

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..