ಸಾಂದರ್ಭಿಕ ಚಿತ್ರ 
ರಾಜ್ಯ

ಅವ್ಯವಸ್ಥೆ ಸರಿಪಡಿಸಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತಾಧಿಕಾರಿಗಳ ನೇಮಕ

ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ಸರಿಪಡಿಸಲು ಮತ್ತು ರೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತ ಅಧಿಕಾರಿಗಳನ್ನು ನೇಮಿಸಲು ಚಿಂತನೆ ನಡೆಸುತ್ತಿದೆ. 

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ಸರಿಪಡಿಸಲು ಮತ್ತು ರೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಆಡಳಿತ ಅಧಿಕಾರಿಗಳನ್ನು ನೇಮಿಸಲು ಚಿಂತನೆ ನಡೆಸುತ್ತಿದೆ. 

3-5 ವರ್ಷಗಳ ಅವಧಿಗೆ ವಿಶೇಷ ಅಧಿಕಾರಿಯನ್ನು ನೇಮಕ ಮಾಡುವ ನಿರೀಕ್ಷೆಯಿದೆ. ಆಸ್ಪತ್ರೆಯ ನಿರ್ವಹಣೆಯನ್ನು ಸುಗಮಗೊಳಿಸುವ ಮತ್ತು ಆಸ್ಪತ್ರೆಯ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಜವಾಬ್ದಾರಿಯನ್ನು ಈ ಅಧಿಕಾರಿ ಹೊಂದಿರುತ್ತಾರೆ.

ವಿಶೇಷ ಆಡಳಿತಾಧಿಕಾರಿಗಳು ಆಸ್ಪತ್ರೆಯ ಆಡಳಿತದ ಉಸ್ತುವಾರಿಯಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಮಿಷನರೇಟ್ ಮತ್ತು ರಾಜ್ಯ ಸರ್ಕಾರದ ನಡುವೆ ಒಂದು ಹಂತದ ನೇರ ಸಂಪರ್ಕದಲ್ಲಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒಂದಲ್ಲಾ ಒಂದು ಸಮಸ್ಯೆ ಇದ್ದೇ ಇರುತ್ತವೆ. ಬೆಂಗಳೂರಿನ ಕೆಲವು ಆಸ್ಪತ್ರೆಗಳು ಮತ್ತು ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯಗಳು, ನಿರ್ಣಾಯಕ ವೈದ್ಯಕೀಯ ಸಾಧನಗಳು, ಔಷಧ ಮತ್ತು ಸಿಬ್ಬಂದಿಗಳ ಕೊರತೆಯಿದೆ. ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರಿ ಆಸ್ಪತ್ರೆಗಳಲ್ಲಿ ದಕ್ಷ ವ್ಯವಸ್ಥೆಯನ್ನು ಜಾರಿಗೆ ತರಲು ಪರಿಸ್ಥಿತಿಯ ಅವಲೋಕನ ಮತ್ತು ದೋಷನಿವಾರಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ವಿಶೇಷ ಅಧಿಕಾರಿಗಳನ್ನು ನೇಮಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!