ಹೈಕೋರ್ಟ್ 
ರಾಜ್ಯ

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ: ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್

ಬಿಬಿಎಂಪಿ ವಾರ್ಡ್‌ಗಳ ಮರು ವಿಂಗಡಣೆ ಮಾಡುವಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, 12 ವಾರಗಳ ಕಾಲಾವಕಾಶ ನೀಡಿದೆ.

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಮರು ವಿಂಗಡಣೆ ಮಾಡುವಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, 12 ವಾರಗಳ ಕಾಲಾವಕಾಶ ನೀಡಿದೆ.

ಬಿಬಿಎಂಪಿ ವಾರ್ಡ್‌ ಮರುವಿಂಗಣೆ ಮಾಡಿ ಹಿಂದಿನ ರಾಜ್ಯ ಸರ್ಕಾರ 2022ರ ಜು.14ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಎತ್ತಿಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮಾಜಿ ಮೇಯರ್‌ ಬಿ.ಎನ್‌. ಮಂಜುನಾಥ ರೆಡ್ಡಿ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಯು ಸೋಮವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಹಿಂದಿನ ಸರ್ಕಾರ ಅಧಿಸೂಚನೆ ವಿಂಗಡಣೆ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ದೋಷಗಳನ್ನು ಸರ್ಕಾರ ಸರಿಪಡಿಸ ಬೇಕಾಗಿರುವುದರಿಂದ ವಾರ್ಡ್‌ಗಳ ವಿಂಗಡಣೆಯನ್ನು ಪುನರ್‌ಗೊಳಿಸುವುದು ಅನಿವಾರ್ಯವಾಗಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಲ್ಲಿಸಿದ ನಂತರ ಈ ತೀರ್ಪು ಬಂದಿದೆ.

ಬಿಬಿಎಂಪಿ ಕಾಯ್ದೆಯು 2021 ರ ಜನವರಿಯಲ್ಲಿ  ವಾರ್ಡ್‌ಗಳ ಸಂಖ್ಯೆಯನ್ನು198 ರಿಂದ 243 ಕ್ಕೆ  ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿತು ಮತ್ತು ವಿಂಗಡಣೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಯಿತು. ಅಧಿಸೂಚನೆಯನ್ನು ಪ್ರಶ್ನಿಸಿ ಒಂದು ಬ್ಯಾಚ್ ಅರ್ಜಿಗಳು ಸಲ್ಲಿಕೆಯಾಗಿದ್ದವು, ಆದರೆ ಏಕ ನ್ಯಾಯಾಧೀಶರು ಅಂತಿಮ ಅಧಿಸೂಚನೆಯನ್ನು ಎತ್ತಿಹಿಡಿದಿದ್ದಾರೆ.

ವಾರ್ಡ್ ವಿಂಗಡಣೆಯ ವರದಿಯನ್ನು ಸಲ್ಲಿಸಲು ರಚಿಸಲಾದ ಸಮಿತಿಯು ಸರ್ಕಾರವು ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಅಗತ್ಯವಿದೆ. ಆದರೆ, ವಾರ್ಡ್  ಪುನರ್ ವಿಗಂಡಣೆಯಲ್ಲಿ ಲೋಪಗಳಾಗಿವೆ ಎಂದು ಮೇಲ್ಮನವಿದಾರರು ವಾದಿಸಿದರು. ವಾರ್ಡ್ ಪುನರ್ ವಿಂಗಡಣೆಯಿಂದ ನಗರ ಆಡಳಿತ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಸುಧಾರಣೆಯಾಗಲಿದೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT