ಏಕನಾಥ್ ಶಿಂಧೆ 
ರಾಜ್ಯ

ಕರ್ನಾಟಕದ ಮಹದಾಯಿ ಯೋಜನೆ ವಿರುದ್ಧ ಗೋವಾ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಬೆಂಬಲ!

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹದಾಯಿ ನೀರು ತಿರುವು ವಿರುದ್ಧ ಗೋವಾದ ಬಿಜೆಪಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹದಾಯಿ ನೀರು ತಿರುವು ವಿರುದ್ಧ ಗೋವಾದ ಬಿಜೆಪಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮುಂಬೈನಲ್ಲಿ ನಡೆದ ಸಭೆಯೊಂದರಲ್ಲಿ ಶಿಂಧೆ ಅವರು, ಕರ್ನಾಟಕವು ತನ್ನ ಕಳಸಾ-ಬಂಡೂರಿ ನಾಲಾ ಯೋಜನೆಯನ್ನು ಅನುಷ್ಠಾನಗೊಳಿಸಲು ಮಹದಾಯಿ ನೀರನ್ನು ತಿರುಗಿಸುವುದನ್ನು ತಡೆಯಲು ನಾವು ಗೋವಾ ಸರ್ಕಾರವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು. 

ಸಭೆಯಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಕೂಡ ಭಾಗವಹಿಸಿದ್ದರು. ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟ ನಡೆಸಲಿವೆ ಎಂದು ಶಿಂಧೆ ಹೇಳಿದ್ದಾರೆ.

ಕಳಸಾ-ಬಂಡೂರಿ ನಾಲಾ ಯೋಜನೆಯ ಮೂಲಕ ರಾಜ್ಯದಲ್ಲಿ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಲು ಕರ್ನಾಟಕ ಸರ್ಕಾರ ಅಧಿಕೃತ ಅನುಮೋದನೆಯನ್ನು ಪಡೆದಿರುವ ಸಮಯದಲ್ಲಿ ಶಿಂಧೆ ಅವರ ಈ ಹೇಳಿಕೆ ಬಂದಿದೆ.

ಮಹದಾಯಿ ಯೋಜನೆಯ ಪರಿಷ್ಕೃತ ಸಮಗ್ರ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ ಅನುಮೋದನೆ ನೀಡಿರುವುದು ಮಾತ್ರವಲ್ಲದೆ, ಕೇಂದ್ರ ಸರ್ಕಾರವು ಗೆಜೆಟ್‌ ಅಧಿಸೂಚನೆಯನ್ನೂ ಹೊರಡಿಸಿದೆ.

ಇಷ್ಟೆಲ್ಲಾ ಆದರೂ ಗೋವಾ ಸರ್ಕಾರ ಮಹದಾಯಿ ನದಿಯಿಂದ ಕರ್ನಾಟಕಕ್ಕೆ ನೀರು ಹರಿಸುವುದನ್ನು ತಡೆಯಲು ಸರ್ವ ಪ್ರಯತ್ನ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?