ಏಕನಾಥ್ ಶಿಂಧೆ 
ರಾಜ್ಯ

ಕರ್ನಾಟಕದ ಮಹದಾಯಿ ಯೋಜನೆ ವಿರುದ್ಧ ಗೋವಾ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಬೆಂಬಲ!

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹದಾಯಿ ನೀರು ತಿರುವು ವಿರುದ್ಧ ಗೋವಾದ ಬಿಜೆಪಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹದಾಯಿ ನೀರು ತಿರುವು ವಿರುದ್ಧ ಗೋವಾದ ಬಿಜೆಪಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮುಂಬೈನಲ್ಲಿ ನಡೆದ ಸಭೆಯೊಂದರಲ್ಲಿ ಶಿಂಧೆ ಅವರು, ಕರ್ನಾಟಕವು ತನ್ನ ಕಳಸಾ-ಬಂಡೂರಿ ನಾಲಾ ಯೋಜನೆಯನ್ನು ಅನುಷ್ಠಾನಗೊಳಿಸಲು ಮಹದಾಯಿ ನೀರನ್ನು ತಿರುಗಿಸುವುದನ್ನು ತಡೆಯಲು ನಾವು ಗೋವಾ ಸರ್ಕಾರವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು. 

ಸಭೆಯಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಕೂಡ ಭಾಗವಹಿಸಿದ್ದರು. ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟ ನಡೆಸಲಿವೆ ಎಂದು ಶಿಂಧೆ ಹೇಳಿದ್ದಾರೆ.

ಕಳಸಾ-ಬಂಡೂರಿ ನಾಲಾ ಯೋಜನೆಯ ಮೂಲಕ ರಾಜ್ಯದಲ್ಲಿ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಲು ಕರ್ನಾಟಕ ಸರ್ಕಾರ ಅಧಿಕೃತ ಅನುಮೋದನೆಯನ್ನು ಪಡೆದಿರುವ ಸಮಯದಲ್ಲಿ ಶಿಂಧೆ ಅವರ ಈ ಹೇಳಿಕೆ ಬಂದಿದೆ.

ಮಹದಾಯಿ ಯೋಜನೆಯ ಪರಿಷ್ಕೃತ ಸಮಗ್ರ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ ಅನುಮೋದನೆ ನೀಡಿರುವುದು ಮಾತ್ರವಲ್ಲದೆ, ಕೇಂದ್ರ ಸರ್ಕಾರವು ಗೆಜೆಟ್‌ ಅಧಿಸೂಚನೆಯನ್ನೂ ಹೊರಡಿಸಿದೆ.

ಇಷ್ಟೆಲ್ಲಾ ಆದರೂ ಗೋವಾ ಸರ್ಕಾರ ಮಹದಾಯಿ ನದಿಯಿಂದ ಕರ್ನಾಟಕಕ್ಕೆ ನೀರು ಹರಿಸುವುದನ್ನು ತಡೆಯಲು ಸರ್ವ ಪ್ರಯತ್ನ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT