ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭೇಟಿ ಮಾಡಿದ ಈಶ್ವರ್ ಖಂಡ್ರೆ 
ರಾಜ್ಯ

ಕೇಂದ್ರ ಸಚಿವ ಭೂಪೀಂದ್ರ ಯಾದವ್ ಭೇಟಿಯಾದ ಈಶ್ವರ ಖಂಡ್ರೆ: ಹುಲಿ ಅಭಯಾರಣ್ಯ ಬಾಕಿ ಹಣ ಬಿಡುಗಡೆಗೆ ಮನವಿ

ಕೇಂದ್ರ ಪ್ರಾಯೋಜಿತ ಹುಲಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2022-23ನೇ ಸಾಲಿನಲ್ಲಿ ಮಂಜೂರಾದ ಸುಮಾರು 60 ಕೋಟಿ ರೂ. ಪೈಕಿ 30 ಕೋಟಿ ರೂಪಾಯಿ ಬಾಕಿ ಬರಬೇಕಿದ್ದು, ಕೂಡಲೇ ಹಣ  ಬಿಡುಗಡೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ  ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿ: ಕೇಂದ್ರ ಪ್ರಾಯೋಜಿತ ಹುಲಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2022-23ನೇ ಸಾಲಿನಲ್ಲಿ ಮಂಜೂರಾದ ಸುಮಾರು 60 ಕೋಟಿ ರೂ. ಪೈಕಿ 30 ಕೋಟಿ ರೂಪಾಯಿ ಬಾಕಿ ಬರಬೇಕಿದ್ದು, ಕೂಡಲೇ ಹಣ  ಬಿಡುಗಡೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ  ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿಂದು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಈಶ್ವರ ಖಂಡ್ರೆ, ಹುಲಿ ಯೋಜನೆಯಡಿ ಕಾಳಿ, ಭದ್ರಾ, ನಾಗರಹೊಳೆ, ಬಂಡಿಪುರ ಮತ್ತು ಬಿಳಿಗಿರಿ ರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ  ಪ್ರಸಕ್ತ ಸಾಲಿನಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು 61 ಕೋಟಿ ರೂಪಾಯಿ ಸೇರಿ ಒಟ್ಟಾರೆ ಸುಮಾರು  91.99 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಕೋರಿದ್ದು, ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. 

ಅರಣ್ಯ ರಕ್ಷಣೆ ಮತ್ತು ವಿಸ್ತರಣೆಗಾಗಿ ಕಾಂಪಾ ನಿಧಿಯಡಿ 2023-24ರ ಸಾಲಿನಲ್ಲಿ ರಾಜ್ಯದಿಂದ ಸುಮಾರು 362 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ  140 ಕೋಟಿ ರೂ.ಗೆ ಮಾತ್ರ ಮಂಜೂರಾತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಳಿದ  222 ಕೋಟಿ ಬಾಕಿ ನಿಧಿಯ ಮಂಜೂರಾತಿಗೂ ಮನವಿ ಮಾಡಲಾಗಿದ್ದು, ಇದಕ್ಕೆ ಅಗತ್ಯವಾದ ಎಲ್ಲ ನಿಬಂಧನೆಗಳನ್ನೂ ಪೂರೈಸಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ನಗರ -ವನ ಯೋಜನೆ ಅಡಿ ರಾಜ್ಯದ 9 ನಗರಗಳಿಗಾಗಿ  26 ಕೋಟಿ 70 ಲಕ್ಷ ಯೋಜನೆ ಅನುಮೋದನೆ ನೀಡುವಂತೆಯೂ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದ್ದು, ಭೂಪೇಂದ್ರ ಯಾದವ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT