ಅಪಘಾತದಲ್ಲಿ ಮೃತಪಟ್ಟ ಬಾಲಕಿ 
ರಾಜ್ಯ

ದಾವಣಗೆರೆ: ಟಿಪ್ಪರ್ ಲಾರಿ​ ಹರಿದು 2 ವರ್ಷದ ಬಾಲಕಿ ಸಾವು

ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ. 

ದಾವಣಗೆರೆ: ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ. 

ಕುಂದುವಾಡ ಗ್ರಾಮದ ನಿವಾಸಿ ಗಣೇಶ್ ಎಂಬವರ ಪುತ್ರಿ ಎರಡುವರೆ ವರ್ಷದ ಚರಸ್ವಿ ಮೃತಪಟ್ಟ ಮಗುವಾಗಿದೆ. ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಮನೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕಿ ಮೈಮೇಲೆ ಹರಿದಿದ್ದು ಇದರಿಂದಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿತ್ತು.

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಇನ್ನು ಅಪಘಾತದಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. 

ಈ ವೇಳೆ ಗ್ರಾಮಸ್ಥರು ಲಾರಿ ಚಾಲಕ, ಮಾಲೀಕನ ಬಂಧನಕ್ಕೆ ಒತ್ತಾಯಿಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಹಾಗು ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!