ಸಿದ್ದರಾಮಯ್ಯ 
ರಾಜ್ಯ

ಅಕ್ಕಿ ಹೊಂದಿಸಲು ಹರ ಸಾಹಸ: ನೆರವಿಗೆ ಬರದ ಕೇಂದ್ರ ಸರ್ಕಾರ; ಅನ್ನಭಾಗ್ಯ ಅಕ್ಕಿ ಪೂರೈಕೆ ಮತ್ತಷ್ಟು ವಿಳಂಬ!

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಮತ್ತು ಅಂತ್ಯೋದಯ ಅನ್ನ ಯೋಜನೆ (ಎಎವೈ) ಕಾರ್ಡ್ ಹೊಂದಿರುವವರಿಗೆ ತಲಾ 10 ಕೆಜಿ ಉಚಿತ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರದ ಅನ್ನ ಭಾಗ್ಯ ಯೋಜನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಮತ್ತು ಅಂತ್ಯೋದಯ ಅನ್ನ ಯೋಜನೆ (ಎಎವೈ) ಕಾರ್ಡ್ ಹೊಂದಿರುವವರಿಗೆ ತಲಾ 10 ಕೆಜಿ ಉಚಿತ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರದ ಅನ್ನ ಭಾಗ್ಯ ಯೋಜನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

‘ಅನ್ನ ಭಾಗ್ಯ’ ಯೋಜನೆಯಡಿ ಪ್ರತಿ ಫಲಾನುಭವಿಗೂ ತಿಂಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ ವಿತರಿಸುವ ‘ಗ್ಯಾರಂಟಿ’ ಅನುಷ್ಠಾನಕ್ಕೆ ಅಕ್ಕಿ ಹೊಂದಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಯೋಜನೆಯನ್ನು ಜುಲೈ ಬದಲಿಗೆ ಆಗಸ್ಟ್‌ನಿಂದ ಚಾಲನೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಬೇರೆ ರಾಜ್ಯಗಳನ್ನು ಸಂಪರ್ಕಿಸಿ ಅಕ್ಕಿ ಖರೀದಿಸುವ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಭಾರತ ಆಹಾರ ನಿಗಮದ ಮೂಲಕ ಅಕ್ಕಿ ಪಡೆಯುವ ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ಯಶಸ್ಸು ಸಿಕ್ಕಿಲ್ಲ. ಕೇಂದ್ರ ಸರ್ಕಾರದ ಅಸಹಕಾರದಿಂದ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ, ಯೋಜನೆ ಅನುಷ್ಠಾನವನ್ನು ತಿಂಗಳ ಮಟ್ಟಿಗೆ ಮುಂದೂಡುವ ತೀರ್ಮಾನಕ್ಕೆ ಬಂದಿದೆ.

ಪಂಜಾಬ್, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ (ಎಲ್ಲಾ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು) ರಾಜ್ಯಗಳಿಂದ ಆಹಾರ ಧಾನ್ಯಗಳನ್ನು ಸಂಗ್ರಹಿಸುವ ಬಗ್ಗೆ ಸಿದ್ದರಾಮಯ್ಯ ಸರ್ಕಾರವು ಆಲೋಚನೆ ಹೊಂದಿದೆ. ಆದರೆ ಕರ್ನಾಟಕದ 2,28,000 ಮೆಟ್ರಿಕ್ ಟನ್‌ಗಳು ಅಗತ್ಯವನ್ನು ಪೂರೈಸಲು ಅವರಿಗೆ ಸಾಧ್ಯವಾಗುವುದಿಲ್ಲ ಜೊತೆಗೆ ಈ ಅಕ್ಕಿಗೆ ಹೆಚ್ಚಿನ  ಬೆಲೆ ತೆರಬೇಕಾಗುತ್ತದೆ.

ಬುಧವಾರ ನವದೆಹಲಿಯಲ್ಲಿ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆಂಧ್ರದಲ್ಲಿಅಕ್ಕಿ ಲಭ್ಯವಿದೆ, ಆದರೆ ಕೆಜಿಗೆ 42 ರೂ. ಇದೆ.  ತೆಲಂಗಾಣದಲ್ಲಿ ಭತ್ತ ಮಾತ್ರ ಲಭ್ಯವಿದೆ ಎಂದು ತಿಳಿಸಿದ್ದಾರೆ. ಒಂದು ತಿಂಗಳಿಗೆ 1 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಮಾತ್ರ ಪೂರೈಸುವುದಾಗಿ  ಛತ್ತೀಸ್‌ಗಢ ಸಿಎಂ ನನಗೆ ತಿಳಿಸಿದ್ದಾರೆ ಮತ್ತು  ಅಧಿಕಾರಿಗಳೊಂದಿಗೆ ಚರ್ಚಿಸಿ  ಹೇಳುವುದಾಗಿ ಪಂಜಾಬ್ ಸಿಎಂ ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ಕಾರ ಮುಕ್ತ ಮಾರುಕಟ್ಟೆಗೆ ಹೋದರೆ ಅಕ್ಕಿ ಖರೀದಿಗೆ ಎರಡು ತಿಂಗಳು ಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಬದಲಾಗಿ, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ಎನ್‌ಎಎಫ್‌ಇಡಿ) ಮತ್ತು ಕೇಂದ್ರೀಯ ಭಂಡಾರ್‌ನಂತಹ ಕೇಂದ್ರೀಯ ಸಂಸ್ಥೆಗಳಿಂದ ಖರೀದಿಸಲು ಸರ್ಕಾರ ಯತ್ನಿಸುತ್ತಿದೆ ಎಂದಿದ್ದಾರೆ.

ಈ ಏಜೆನ್ಸಿಗಳು ಟೆಂಡರ್ ಕರೆದು, ಬೆಲೆ ನಿಗದಿ ಪಡಿಸಿ ಕರ್ನಾಟಕ ಸರ್ಕಾರಕ್ಕೆ ಶೀಘ್ರದಲ್ಲೇ ತಿಳಿಸುತ್ತವೆ. ಆದರೆ ಬೆಲೆಯು ಎಫ್‌ಸಿಐನ  ಬೆಲೆಗಿಂತ ಸ್ವಲ್ಪ ಹೆಚ್ಚು ಎಂದು ನಿರೀಕ್ಷಿಸಲಾಗಿದೆ. ಇದೆಲ್ಲವೂ ಕೇಂದ್ರ ಸರ್ಕಾರದ ರಾಜಕೀಯ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT