ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ (ಕುಳಿತು, ಮುಖವಾಡ ಧರಿಸಿ) ಅವರು ಬುಧವಾರ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದರು. 
ರಾಜ್ಯ

ಶಕ್ತಿ ಯೋಜನೆ: ಬಸ್ ನಲ್ಲಿ ಬಿಎಂಟಿಸಿ ಎಂಡಿ ಸತ್ಯವತಿ ರೌಂಡ್ಸ್, ಸಿಬ್ಬಂದಿ ಕಾರ್ಯವೈಖರಿ ಪರಿಶೀಲನೆ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯದ ಶಕ್ತಿ ಯೋಜನೆಯಡಿಯಲ್ಲಿ ನಿರ್ವಾಹಕರು ಮಹಿಳೆಯರಿಕೆ ಟಿಕೆಟ್ ವಿತರಿಸುವ, ಮಹಿಳಾ ಪ್ರಯಾಣಿಕರ ಜೊತೆ ವರ್ತನೆ ಸೇರಿದಂತೆ ವಿವಿಧ ಅಂಶಘಳ ಬಗ್ಗೆ ನಿಗಮದ ವ್ಯವಸ್ಥಾಪ ನಿರ್ದೇಶಕಿ ಜಿ.ಸತ್ಯವತಿ ಅವರು ಖುದ್ದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಪರಿಶೀಲನೆ ನಡೆಸಿದರು.

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯದ ಶಕ್ತಿ ಯೋಜನೆಯಡಿಯಲ್ಲಿ ನಿರ್ವಾಹಕರು ಮಹಿಳೆಯರಿಕೆ ಟಿಕೆಟ್ ವಿತರಿಸುವ, ಮಹಿಳಾ ಪ್ರಯಾಣಿಕರ ಜೊತೆ ವರ್ತನೆ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ನಿಗಮದ ವ್ಯವಸ್ಥಾಪ ನಿರ್ದೇಶಕಿ ಜಿ.ಸತ್ಯವತಿ ಅವರು ಖುದ್ದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಪರಿಶೀಲನೆ ನಡೆಸಿದರು.

ಬುಧವಾರ ಶಾಂತಿನಗರದಿಂದ ಲಾಲ್ ಬಾಗ್, ರಾಮಕೃಷ್ಣ ಆಶ್ರಮ, ಗಣೇಶ್ ಭವನ, ಸೀತಾ ಸರ್ಕಲ್, ಹೊಸಕೆರೆಹಳ್ಳಿ ಕ್ರಾಸ್, ನಾಯಂಡಹಳ್ಳಿ ಮಾರ್ಗವಾಗಿ ದೀಪಾಂಜಲಿ ನಗರದವರೆಗೆ ಬಿಎಂಟಿಸಿ ಬಸ್ ನಲ್ಲಿ ಸತ್ಯವತಿಯವರು ಸಂಚರಿಸಿದರು.

ನಿರ್ವಾಹಕರು ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ನೀಡುವುದು, ಪ್ರಯಾಣಿಕರೊಂದಿಗೆ ಹೇಗೆ ವರ್ತಿಸುತ್ತಾರೆಂಬುದನ್ನು ಪರಿಶೀಲಿಸಿದರು.

ಬಸ್ ನಲ್ಲಿನ ಪ್ರಯಾಣ ಉತ್ತಮವಾಗಿದ್ದು, ಮಹಿಳೆಯರು ಮತ್ತು ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದೆ. ಪೀಕ್ ಅವರ್‌ಗಳಲ್ಲಿ ಶಕ್ತಿ ಯೋಜನೆಯಡಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಬಯಸುವ ಮಹಿಳಾ ಪ್ರಯಾಣಿಕರು ಆಧಾರ್ ಮತ್ತು ಇತರ ಐಡಿ ಕಾರ್ಡ್‌ಗಳಂತಹ ವಿಳಾಸ ದಾಖಲೆಗಳ ಪರಿಶೀಲಿಸಲು ನಿರ್ವಾಹಕರಿಗೆ ಕಷ್ಟಕರವಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆಯನ್ನು ಶಕ್ತಿ ಸ್ಮಾರ್ಟ್‌ ಕಾರ್ಡ್ ಗಳ ಬಳಿಕ ಪರಿಹರಿಸಲಾಗುವುದು. ಈ ಕಾರ್ಡ್ ಗಳನ್ನು ತೋರಿಸುವ ಮೂಲಕ ಮಹಿಳೆಯರು ಪ್ರಯಾಣ ಮಾಡಬಹುದು. ಇದು ಸಮಯ ಉಳಿಸಲು ಸಹಾಯ ಮಾಡುತ್ತದೆ ಎಂದು ಸತ್ಯವತಿಯವರು ಹೇಳಿದರು.

ಇದನ್ನು ಹೊರತುಪಡಿಸಿ, ಶಕ್ತಿ ಯೋಜನೆಯ ಸುಗಮ ಅನುಷ್ಠಾನದ ಮೇಲೆ ಪರಿಣಾಮ ಬೀರುವ ಯಾವುದೇ ಪ್ರಮುಖ ಸಮಸ್ಯೆ ಕಂಡುಬಂದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ದೀಪಾಂಜಲಿನಗರದ ಬಸ್ ಡಿಪೋದಲ್ಲಿ ಬಿಎಂಟಿಸಿ ಸಿಬ್ಬಂದಿಗಳೊಂದಿಗೆ ಮಾತನಾಡಿದ ಸತ್ಯವತಿಯವರು ಸಮಸ್ಯೆಗಳನ್ನು ಆಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT