ಕುಕ್ಕೆ ಸುಬ್ರಮಣ್ಯ ದೇವಾಲಯ 
ರಾಜ್ಯ

65 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ

ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಮನವಿ ಸಲ್ಲಿಸಿದ್ದರು.

ದೇವಾಲಯಗಳಲ್ಲಿ ದರ್ಶನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದೆ, ಇದರಿಂದ ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿದೆ. ಇವರು ತಮ್ಮ ವಯಸ್ಸಿನ ದಾಖಲೆ ಅಥವಾ ಆಧಾರ್‌ ಕಾರ್ಡ್‌ ಅನ್ನು ತೋರಿಸಿದರೆ, ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳಾವಕಾಶ ಇದ್ದರೆ ಪ್ರತ್ಯೇಕ ಸ್ಥಳ ಕಾಯ್ದಿರಿಸುವಂತೆಯೂ ಸೂಚಿಸಲಾಗಿದೆ.

ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರವನ್ನು ಸ್ಥಾಪಿಸಿ, ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಿ ದೇವರ ದರ್ಶನದ ವ್ಯವಸ್ಥೆ ಮಾಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಹಿರಿಯ ನಾಗರಿಕರು 202 ಪ್ರವರ್ಗ 'ಎ' ಮತ್ತು 156 ವರ್ಗ 'ಬಿ' ಗೆ ಸೇರಿದ ಮುಜರಾಯಿ ಇಲಾಖೆಯ ಒಟ್ಟು 358 ದೇವಸ್ಥಾನಗಳಲ್ಲಿ ಸರದಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದರ್ಶನ ಪಡೆಯಬಹುದಾಗಿದೆ.

ಇದರಲ್ಲಿ ಬೆಂಗಳೂರಿನ ದೊಡ್ಡ ಗಣಪತಿ, ಬನಶಂಕರಿ ಮತ್ತು ಧರ್ಮರಾಯ ಸ್ವಾಮಿ ದೇವಸ್ಥಾನಗಳು, ದಕ್ಷಿಣ ಕನ್ನಡದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಸ್ಥಾನಗಳು  ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT