ಕುಕ್ಕೆ ಸುಬ್ರಮಣ್ಯ ದೇವಾಲಯ 
ರಾಜ್ಯ

65 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ

ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಮನವಿ ಸಲ್ಲಿಸಿದ್ದರು.

ದೇವಾಲಯಗಳಲ್ಲಿ ದರ್ಶನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದೆ, ಇದರಿಂದ ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿದೆ. ಇವರು ತಮ್ಮ ವಯಸ್ಸಿನ ದಾಖಲೆ ಅಥವಾ ಆಧಾರ್‌ ಕಾರ್ಡ್‌ ಅನ್ನು ತೋರಿಸಿದರೆ, ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳಾವಕಾಶ ಇದ್ದರೆ ಪ್ರತ್ಯೇಕ ಸ್ಥಳ ಕಾಯ್ದಿರಿಸುವಂತೆಯೂ ಸೂಚಿಸಲಾಗಿದೆ.

ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರವನ್ನು ಸ್ಥಾಪಿಸಿ, ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಿ ದೇವರ ದರ್ಶನದ ವ್ಯವಸ್ಥೆ ಮಾಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಹಿರಿಯ ನಾಗರಿಕರು 202 ಪ್ರವರ್ಗ 'ಎ' ಮತ್ತು 156 ವರ್ಗ 'ಬಿ' ಗೆ ಸೇರಿದ ಮುಜರಾಯಿ ಇಲಾಖೆಯ ಒಟ್ಟು 358 ದೇವಸ್ಥಾನಗಳಲ್ಲಿ ಸರದಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದರ್ಶನ ಪಡೆಯಬಹುದಾಗಿದೆ.

ಇದರಲ್ಲಿ ಬೆಂಗಳೂರಿನ ದೊಡ್ಡ ಗಣಪತಿ, ಬನಶಂಕರಿ ಮತ್ತು ಧರ್ಮರಾಯ ಸ್ವಾಮಿ ದೇವಸ್ಥಾನಗಳು, ದಕ್ಷಿಣ ಕನ್ನಡದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಸ್ಥಾನಗಳು  ಸೇರಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT