ವೃದ್ಧೆ ಗಿರಿಜಮ್ಮರ ಮನೆ 
ರಾಜ್ಯ

ಪುಟ್ಟ ಮನೆಯಲ್ಲಿ ಎರಡು ಬಲ್ಬ್ ಹೊಂದಿರುವ ವೃದ್ಧೆಗೆ ಲಕ್ಷ ರೂ. ವಿದ್ಯುತ್ ಬಿಲ್: ಪ್ರಮಾದ ಸರಿಪಡಿಸಿದ ಜೆಸ್ಕಾಂ ಎಂಜಿನಿಯರ್

ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ.

ಕೊಪ್ಪಳ: ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ.

ಕೊಪ್ಪಳದ ಭಾಗ್ಯನಗರದಲ್ಲಿ ಸಣ್ಣ ತಗಡಿನ ಶೆಡ್​ನಲ್ಲಿ ವಾಸವಾಗಿರುವ 90 ವಯಸ್ಸಿನ ಗಿರಿಜಮ್ಮ ಮನೆಯಲ್ಲಿ ಎರಡು ಬಲ್ಬ್ ಸಂಪರ್ಕ ಹಾಕಿಸಿಕೊಂಡಿದ್ದಾರಷ್ಟೆ. ಈ ಅಜ್ಜಿ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದರು. ಹೀಗಾಗಿ ಜೆಸ್ಕಾಂ, 70 ರಿಂದ 80 ರೂಪಾಯಿ ಬೀಲ್ ನೀಡುತ್ತಿತ್ತು. ಆದರೆ, ಆರು ತಿಂಗಳ ಹಿಂದೆ ವೃದ್ದೆಯ ಮನೆಗೆ ಜೆಸ್ಕಾಂ ಸಿಬ್ಬಂದಿ ಮೀಟರ್ ಅಳವಡಿಸಿದ್ದು, ಇದೀಗ 6 ತಿಂಗಳಲ್ಲಿ ಅಜ್ಜಿ ಮನೆಗೆ ಬರೋಬ್ಬರಿ 1,03,315 ರೂಪಾಯಿ ಬಿಲ್ ಬಂದಿದ್ದು, ಅಜ್ಜಿ ಶಾಕ್ ಆಗಿದ್ದಾರೆ.

ಈ ಅಜ್ಜಿ ಈಗ 1 ಲಕ್ಷ ರೂ. ವಿದ್ಯುತ್ ಬಿಲ್ ಹೇಗೆ ಕಟ್ಟುವುದು ಎಂದು ಕಣ್ಣೀರಿಡುತ್ತಿದ್ದಾರೆ. ಇನ್ನು ಒಂದು ತಗಡಿನ ಶೆಡ್ ಮನೆಯಲ್ಲಿ ಕೇವಲ ಎರಡು ಬಲ್ಬ್​ಗೆ ಲಕ್ಷಗಟ್ಟಲೇ ವಿದ್ಯುತ್​ ಬಿಲ್​ ಬರುತ್ತಾ ಎನ್ನುವುದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. 

ಗೃಹ ಜ್ಯೋತಿ ಯೋಜನೆ(Gruha jyothi scheme) ಅಡಿಯಲ್ಲಿ  200 ಯುನಿಟ್​ ವಿದ್ಯುತ್ ಫ್ರೀ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಹಲವೆಡೆ ವಿದ್ಯುತ್​ ಬಿಲ್ ಲಕ್ಷ ಲಕ್ಷ ಬರುತ್ತಿರುವುದು ಇತ್ತೀಚೆಗೆ ವರದಿಯಾಗಿತ್ತು. ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರ ಮನೆಗೆ 7.71 ಸಾವಿರ ರೂಪಾಯಿ ವಿದ್ಯುತ್ ಬಿಲ್​ ನೀಡಲಾಗಿತ್ತು. ಬೆಳಗಾವಿಯ ವಿಟಿಯು ವಿಶ್ವವಿದ್ಯಾಯಲಕ್ಕೆ ಹೆಸ್ಕಾಂ ಬರೋಬ್ಬರಿ 18 ಲಕ್ಷ ರೂಪಾಯಿ ವಿದ್ಯುತ್ ಬಿಲ್ ನೀಡಿದ್ದು ಸುದ್ದಿಯಾಗಿತ್ತು.

ಜೆಸ್ಕಾಂ ಎಂಜಿನಿಯರ್ ಸ್ಪಷ್ಟನೆ: ವೃದ್ಧೆ ಗಿರಿಜಮ್ಮ ನಿವಾಸಕ್ಕೆ ಇಂದು ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್​​ ಭೇಟಿ ನೀಡಿದ್ದಾರೆ. 2021ರಿಂದ ಮೀಟರ್ ರೀಡಿಂಗ್ ತೊಂದರೆಯಿಂದ ಬಿಲ್ ಬಂದಿದೆ. ಅಜ್ಜಿ ಗಿರಿಜಮ್ಮ ವಿದ್ಯುತ್​​ ಬಿಲ್ ಪಾವತಿ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಸಿಬ್ಬಂದಿ ಹಾಗೂ ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಹೀಗಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ನಮ್ಮ ಗಮನಕ್ಕೆ ತನ್ನಿ ಎಂದು ಕೊಪ್ಪಳ ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್​​ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT