ಡಿಕೆ.ಶಿವಕುಮಾರ್ 
ರಾಜ್ಯ

ನಾಗರಿಕ ಯೋಜನೆಗಳಲ್ಲಿನ ಅವ್ಯವಹಾರದ ತನಿಖೆಗೆ ಎಸ್‌ಐಟಿ ರಚನೆ: ಡಿಕೆ ಶಿವಕುಮಾರ್

ಬಿಬಿಎಂಪಿ ಮತ್ತು ಬಿಡಿಎ ಯೋಜನೆಗಳಲ್ಲಿನ ಭ್ರಷ್ಟಾಚಾರಗಳ ಕುರಿತ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲಾಗುವುದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ಬಿಬಿಎಂಪಿ ಮತ್ತು ಬಿಡಿಎ ಯೋಜನೆಗಳಲ್ಲಿನ ಭ್ರಷ್ಟಾಚಾರಗಳ ಕುರಿತ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲಾಗುವುದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ವಿವಿಧ ಕಾಮಗಾರಿಗಳು, ಟೆಂಡರ್‌ಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಬಿಜೆಪಿ (BJP) ನಾಯಕರ ಟೀಕೆ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಅವರು, ಜೆಪಿಯವರಿಗೆ ಜೋರಾಗಿ ಟೀಕೆ ಮಾಡಲು ಹೇಳಿ. ಎಲ್ಲವನ್ನೂ ಬಿಚ್ಚಿಡುತ್ತೇನೆಂದು ತಿರುಗೇಟು ನೀಡಿದರು.

ನಾಗರಿಕ ಯೋಜನೆಗಳಲ್ಲಿನ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ. ಯೋಜನೆಗಳೆಲ್ಲವೂ  ಸ್ಪಷ್ಟ ಮತ್ತು ಪಾರದರ್ಶಕವಾಗಿದ್ದರೆ" ಮಾತ್ರ ಪುನರಾರಂಭವಾಗಲಿದೆ ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಎಚ್ಚರಿಕೆ ನೀಡಿದ ಅವರು, ಆರ್‌ಆರ್‌ನಗರದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಕಾಮಗಾರಿಯಾಗದೇ ಬಿಲ್ ಗಳನ್ನು ತೆರವುಗೊಳಿಸಿರುವುದನ್ನು ಲೋಕಾಯುಕ್ತರು ಖಚಿತಪಡಿಸಿದ್ದಾರೆ. ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಬಿಡಿಎ ಯೋಜನೆಗಳ ಬಗ್ಗೆಯೂ ಎಸ್‌ಐಟಿ ತನಿಖೆಯ ಅಗತ್ಯವಿದೆ. ನಮ್ಮ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ’ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT