ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ‌ ಬೇಡರಪುರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಎಂದು ಗುರುತಿಸಿದ್ದಾರೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಶುಕ್ರವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಗೆ ಹೋದಾಗ ಮನೆಯಲ್ಲಿದ್ದ ಮೂವರೂ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ‌ ಕಾರಣ ತಿಳಿದುಬಂದಿಲ್ಲ.

ಆದರೆ, ಇವರ ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತಿತ್ತು ಎಂದು ಹೇಳಲಾಗಿದೆ. ಆದರೆ, ಸಾವಿಗೆ ಅದೇ ಕಾರಣವಾಯಿತಾ? ಬೇರೆ ಏನಾದರೂ ಕಾರಣಗಳಿವೆಯೇ ಎಂದು ತಿಳಿದುಬಂದಿಲ್ಲ. ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ

Toxic Teaser: ಕಾರಿನಲ್ಲಿ ಯಶ್ ಜೊತೆ ಮಿಸ್ಟರಿ ವುಮನ್? ಸಂಚಲನ ಸೃಷ್ಟಿಸಿದ ಹಾಲಿವುಡ್ ಬೆಡಗಿ ಇವರೇ!

Grihalakshmi: ಶೀಘ್ರದಲ್ಲೇ ಫೆಬ್ರವರಿ-ಮಾರ್ಚ್ ತಿಂಗಳ ಪಾವತಿ, BPL ಕಾರ್ಡ್ ರದ್ದಾಗಿದ್ದರೆ ಹಣ ಕೂಡ ರದ್ದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Vijay Hazare Trophy: 9 ಸಿಕ್ಸರ್, 2 ಬೌಂಡರಿ, 31 ಎಸೆತಗಳಲ್ಲಿ 75 ರನ್: ಚಂಡೀಗಢ ವಿರುದ್ಧ Hardik Pandya ಸ್ಫೋಟಕ ಬ್ಯಾಟಿಂಗ್!

ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್; ಅಸ್ಸಾಂ ಚುನಾವಣಾ ವೀಕ್ಷಕರಾಗಿ ಡಿಕೆಶಿ ನೇಮಕ: ಡಿಸಿಎಂ ಹೇಳಿದ್ದೇನು?

SCROLL FOR NEXT