ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ಅರಕಲಗೂಡಿನ ಎಸ್‌ಬಿಐ ಶಾಖೆಯಲ್ಲಿ ಅಡವಿಟ್ಟಿದ್ದ ಚಿನ್ನ ಕಳ್ಳತನ, ಅಟೆಂಡರ್ ಬಂಧನ!

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿಯ ಎಸ್‌ಬಿಐ ಶಾಖೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಗ್ರಾಹಕರು ಅಡಮಾನವಿಟ್ಟ ₹90 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿರುವ ಆರೋಪ ಕೇಳಿಬಂದಿದೆ.

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿಯ ಎಸ್‌ಬಿಐ ಶಾಖೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಗ್ರಾಹಕರು ಅಡಮಾನವಿಟ್ಟ ₹90 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿರುವ ಆರೋಪ ಕೇಳಿಬಂದಿದೆ.

ಕಳೆದ 10 ವರ್ಷಗಳಿಂದ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಲವ (39) ವಿರುದ್ಧ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಹೊರಗುತ್ತಿಗೆ ಏಜೆನ್ಸಿ ಮೂಲಕ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಆರೋಪಿ ಗ್ರಾಹಕರು ಸಾಲಕ್ಕಾಗಿ ಅಡಮಾನವಿಟ್ಟಿದ್ದ ಚಿನ್ನಾಭರಣಗಳನ್ನು ನಕಲಿ ಚಿನ್ನದಿಂದ ಬದಲಾಯಿಸುತ್ತಿದ್ದನು. ಕಳೆದ ಒಂದು ವರ್ಷದಿಂದ ಇದೇ ನಡೆದಿದ್ದು, ಅಧಿಕಾರಿಗಳು ಇತ್ತೀಚೆಗೆ ಇದನ್ನು ಗಮನಿಸಿದ್ದಾರೆ.

ಜೂನ್ 14ರಂದು ಹಾಸನದ ಎಸ್‌ಬಿಐ ಸಹಾಯಕ ಪ್ರಧಾನ ವ್ಯವಸ್ಥಾಪಕಿ ಅನುರಾಧಾ ಟಿ. ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಕೊಣನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಡಮಾನವಿಟ್ಟ ಚಿನ್ನಾಭರಣ ತುಂಬಿದ ಪೊಟ್ಟಣಗಳನ್ನು ಸೇಫ್ಟಿ ಲಾಕರ್‌ಗಳಲ್ಲಿ ಇಡುವ ಕೆಲಸವನ್ನು ಆರೋಪಿಗೆ ವಹಿಸಲಾಗಿತ್ತು ಎಂದು ಹಾಸನದ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ವೇಳೆ ಆತ ನಿಜವಾದ ಚಿನ್ನವನ್ನು ಹೊರತೆಗೆದು ನಕಲಿ ಚಿನ್ನವನ್ನು ಅದರಲ್ಲಿ ಹಾಕಿ ಇಡುತ್ತಿದ್ದನು. ಆರೋಪಿಯನ್ನು ಬಂಧಿಸಲಾಗಿದೆ ಎಂದು ಶಂಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT